nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿ.ಹೊಸಹಳ್ಳಿಯ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ರಾಮಕೃಷ್ಣ ಸೇವಾಶ್ರಮದಿಂದ  ಕಲಿಕಾ ಸಾಮಗ್ರಿ ವಿತರಣೆ
    ಪಾವಗಡ July 27, 2024

    ಬಿ.ಹೊಸಹಳ್ಳಿಯ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ರಾಮಕೃಷ್ಣ ಸೇವಾಶ್ರಮದಿಂದ  ಕಲಿಕಾ ಸಾಮಗ್ರಿ ವಿತರಣೆ

    By adminJuly 27, 2024No Comments2 Mins Read
    pavagada

    ಪಾವಗಡ:  ತಾಲ್ಲೂಕಿನ ಅತ್ಯಂತ ಹಿಂದುಳಿದ ಹಾಗೂ ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಂತೆ ಇರುವ ಬಿ.ಹೊಸಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 150 ಮಕ್ಕಳಿಗೆ ಶಾಲಾ ಬ್ಯಾಗು, ನೋಟ್ ಪುಸ್ತಕಗಳು ಹಾಗೂ ನಿತ್ಯ ಉಪಯೋಗಿಸುವ ಕುಡಿಯುವ ನೀರಿನ ಬಾಟಲ್‌ ಗಳನ್ನು ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ವಿತರಿಸಲಾಯಿತು.

    ಕಾರ್ಯಕ್ರಮವು ಈ ಕುಗ್ರಾಮವಾದ ಬಿ.ಹೊಸಹಳ್ಳಿಯಲ್ಲಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಪೂಜ್ಯ ಸ್ವಾಮೀಜಿಯವರನ್ನು ಗ್ರಾಮಸ್ಥರು ಸ್ವಾಗತಿಸಿದರು. ಬಳಿಕ ಶಾಲೆಯ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.


    Provided by
    Provided by

    ಮಕ್ಕಳಿಗೆ ಶಾಲಾ ಬ್ಯಾಗು ಮತ್ತಿತರ ಪರಿಕರಗಳನ್ನು ವಿತರಿಸಿದ ಬಳಿಕ  ಮಾತನಾಡಿದ ಸ್ವಾಮಿ ಜಪಾನಂದಜೀ ಮಹಾರಾಜ್, ಬಿ.ಹೊಸಹಳ್ಳಿ ಗ್ರಾಮದ ಗ್ರಾಮಸ್ಥರಿಗೆ ಭಾರತೀಯ ಸಂಸ್ಕೃತಿಯ, ಪರಂಪರೆಯನ್ನು ಉಳಿಸಿಕೊಂಡು ಬರಲು ಒತ್ತುಕೊಟ್ಟಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.

    ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ಅತ್ಯಂತ ಕುಗ್ರಾಮವಾಗಿರುವ ಹಾಗೂ ಮುಖ್ಯ ವಾಹಿನಿಯಿಂದ ದೂರವಾಗಿರುವ ಶಾಲೆಗಳನ್ನು ಗುರುತಿಸಿ ಪ್ರತಿ ವರ್ಷ ಈ ತೆರನಾದ ಸೇವೆಯನ್ನು ಮಾಡುತ್ತಿದ್ದೇವೆ. ಈ ಬಾರಿ ಬಿ.ಹೊಸಹಳ್ಳಿಗೆ ಭೇಟಿ ನೀಡಿದ್ದು, ಇಲ್ಲಿಯ ಸ್ಥಿತಿಗತಿಗಳನ್ನು ಕಂಡು ನಿಜಕ್ಕೂ ಸಹಕಾರ ನೀಡಿದ್ದು, ಇಲ್ಲಿಯ ಮಕ್ಕಳಿಗೆ ಹೆಚ್ಚು ಪ್ರೋತ್ಸಾಹ ನೀಡುವಂತಹ ಸೇವೆಯನ್ನು ಮಾಡುತ್ತೇವೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬಿ.ಹೊಸಹಳ್ಳಿ ಗ್ರಾಮದ ಶ್ರೀ ಪ್ರಜ್ವಲರೆಡ್ಡಿ ಇತ್ತೀಚಿನ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಿಗೆ 710 ಅಂಕಗಳನ್ನು ಪಡೆದು ರಾಷ್ಟ್ರದಲ್ಲಿಯೇ ಹೆಸರು ಮಾಡಿದ್ದಾನೆ. ಇಂತಹ ಅನೇಕಾನೇಕ ವಿದ್ಯಾರ್ಥಿಗಳು ಗ್ರಾಮಗಳಲ್ಲಿದ್ದು ಅದರಲ್ಲಿಯೂ ಬಿ.ಹೊಸಹಳ್ಳಿಯಂತಹ ಅತ್ಯಂತ ಕುಗ್ರಾಮ, ಸುತ್ತಲೂ ಬೆಟ್ಟಗುಡ್ಡಗಳು ಹಾಗೂ ಅರಣ್ಯ ಪ್ರದೇಶವನ್ನು ಹೊಂದಿರುವಂತಹ ಜೊತೆಯಲ್ಲಿ ಸರಿಯಾದ ವಾಹನ ಸೌಕರ್ಯಗಳಿಲ್ಲದೆ ಕಷ್ಟಪಟ್ಟು ಓದುತ್ತಿರುವ ಈ ಮಕ್ಕಳಿಗೆ ಎಷ್ಟು ಸಹಾಯ ಮಾಡಿದರೂ ಸಾಲದು. ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಆದಷ್ಟು ಶ್ರೀ ರಾಮಕೃಷ್ಣ ಸೇವಾಶ್ರಮದ ಮೂಲಕ ಸಹಾಯಹಸ್ತ ನೀಡಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

    ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಜಿ ಶಾಸಕರಾದ  ತಿಮ್ಮರಾಯಪ್ಪ,  ಪೂಜ್ಯ ಸ್ವಾಮೀಜಿಯವರು ರಾಷ್ಟ್ರದಲ್ಲಿಯೇ ತಮ್ಮ ಸೇವಾ ಯಜ್ಞಗಳನ್ನು ಅವಿರತವಾಗಿ ನಡೆಸುತ್ತಾ ಇಂದು ಬಿ.ಹೊಸಹಳ್ಳಿಯ ಸೌಭಾಗ್ಯದಂತೆ ಈ ಗ್ರಾಮಕ್ಕೆ ತಲುಪಿದ್ದು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆ, ಈ ಕುಗ್ರಾಮದ ಶಾಲೆಗೆ ಶಾಶ್ವತ ಶಿಕ್ಷಕರೇ ಇಲ್ಲ, ಕೇವಲ ನಿಯೋಜಿತರಾದ ಶಿಕ್ಷಕರು ಕೆಲಸ ಮಾಡುತ್ತಿದ್ದು, ಸದರಿ ಶಾಲೆಗೆ ಶಾಶ್ವತ ಶಿಕ್ಷಕರನ್ನು ನೇಮಿಸಬೇಕೆಂದು ಸರ್ಕಾರದ ಗಮನಕ್ಕೆ ತಂದರು.

    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು ಭಾಗವಹಿಸಿದ್ದರು. ಶ್ರೀ ರಾಮಕೃಷ್ಣ ಸೇವಾಶ್ರಮದ ಶ್ರೀ ಕೆ.ಎಸ್.ರಾಮಮೂರ್ತಿ, ಶ್ರೀ ಬಾಲಾಜಿ ಹಾಗೂ ಶ್ರೀ ವೀರೇಶ್ ರವರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!

    December 10, 2025

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ

    December 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್…

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.