ಪಾವಗಡ: ತಾಲ್ಲೂಕಿನ ಪ್ರತಿಷ್ಠಿತ ಶಾಲೆಯಾದ ಜ್ಞಾನಬೋಧಿನಿ ಶಾಲೆಯಲ್ಲಿ ಜುಲೈ 29ರಿಂದ ಆಗಸ್ಟ್ 2ವರೆಗೆ ನೂತನ ಪದವೀಧರ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುಮಾರು ಐದು ದಿನಗಳ ಕಾಲ ಮಕ್ಕಳ ಕಲಿಕಾ ಬಲಸಂವರ್ಧನೆ ಬಗ್ಗೆ ತರಬೇತಿ ನೀಡಲಾಗುತ್ತಿದೆ.
ಜ್ಞಾನಬೋಧಿನಿ ಶಾಲೆಯ ಅಧ್ಯಕ್ಷರಾದ ಜಿ.ಅನಿಲ್ ಕುಮಾರ್ ಹಾಗೂ ಕಾರ್ಯದರ್ಶಿಗಳಾದ ಡಾ.ಕೆ.ಎಸ್.ಅನಿಲ್ ಕುಮಾರ್ ಪಾಲ್ಗೊಂಡಿದ್ದು, ಈ ಸಸಂದರ್ಭದಲ್ಲಿ ಕೆ.ಎಸ್.ಅನಿಲ್ ಕುಮಾರ್ ಅವರು, ನೂತನ ಪದವೀಧರ ಶಿಕ್ಷಕರನ್ನು ಕುರಿತು ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಾದ ಗಂಗಾಧರ್ ಎಚ್.ಆರ್., ವಿಷಯ ಪರಿವೀಕ್ಷಕರಾದ ಚಿತ್ತಯ್ಯ ಮತ್ತು ಡಯಟ್ ನ ಉಪನ್ಯಾಸಕರಾದ ನವೀನ್ ಕುಮಾರ್, ಹಾಗೆಯೇ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ದೇವರಾಜು ಮತ್ತು ಸಾಧಿಕ್ ಉಲ್ಲಾ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಪದವೀಧರ ಶಿಕ್ಷಕರಿಗೆ ತರಬೇತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA