ತಿಪಟೂರು: ನಾಡಿನ ಸಮಸ್ತ ಜನರ ಅಭ್ಯುದಯಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ನೀಡಿದೆ ಅದರಲ್ಲಿ ಗಂಗಾ ಕಲ್ಯಾಣ ಯೋಜನೆಯೂ ಒಂದು ಇಂತಹ ಯೋಜನೆಗಳನ್ನು ಪಡೆದು ನೀವು ಅಭಿವೃದ್ಧಿಹೊಂದಿ ನಾಲ್ಕಾರು ಜನರಿಗೆ ಮಾದರಿಯಾಗಿ ಎಂದು ಶಾಸಕ ಕೆ.ಷಡಕ್ಷರಿ ಫಲಾನುಭವಿಗಳಿಗೆ ಕರೆನೀಡಿದರು.
ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ೨೦೧೯–೨೦, ೨೦೨೦–೨೧ನೇ ಸಾಲಿನ ಗಂಗಾಕಲ್ಯಾಣ ಯೋಜನೆಯ ಪಂಪ್ ಸೆಟ್ ಹಾಗೂ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ತಿಪಟೂರು ಸರ್ಕಾರಿ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಿ ಎಂದು ಕರೆ ನೀಡಿದರಲ್ಲದೇ, ನಾಡಿನ ಸಮಸ್ತ ಜನರ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು ನೀಡಿದೆ ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಾ.ಸಂಪತ್ ರಾಜ್ ವಿಡಿಯೋ ಕರೆಯ ಮೂಲಕ ಫಲಾನುಭವಿಗಳೊಂದಿಗೆ ಮಾತನಾಡಿ, ನಿಮ್ಮ ಅಭಿವೃದ್ಧಿಗಾಗಿ ಯೋಜನೆಗಳನ್ನು ಪಡೆದಿದ್ದೀರಾ, ಆದರೆ ಇವುಗಳನ್ನು ಸದ್ಭಳಕೆ ಮಾಡಿದಾಗ ಮಾತ್ರ ಸರ್ಕಾರದ ಯೋಜನೆಗೆ ಒಂದು ಬೆಲೆ. ಆದ್ದರಿಂದ ಯಂತ್ರೋಪಕರಣಗಳನ್ನು ಬಳಸಿಕೊಂಡು ಅಭಿವೃದ್ಧಿಹೊಂದಿ ದೇಶಕ್ಕೆ ಮಾದರಿಯಾಗುವ ಹಾಗೆ ಕಾರ್ಯನಿರ್ವಹಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ತಾಲ್ಲೂಕು ಅಧಿಕಾರಿ ಮಹೇಂದ್ರ ಫಲಾನುಭವಿಗಳು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA