ಪಾವಗಡ: 2024-25 ನೇ ಸಾಲಿನ ನೀಡಗಲ್ ಹೋಬಳಿಯ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು.
ಕ್ರೀಡಾಕೂಟವನ್ನು ಉದ್ಘಾಟನೆ ನೆರವೇರಿಸಿದ ಬಳಿಕ ಮಾತನಾಡಿದ ಇಂದ್ರಾಣಮ್ಮ, ಕ್ರೀಡೆಯಲ್ಲಿ ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಉತ್ತಮ ಆಟವನ್ನು ಆಡಿದಂತ ವ್ಯಕ್ತಿಗಳು ಮಾತ್ರ ಗೆಲ್ಲಲು ಸಾಧ್ಯವಾಗುತ್ತದೆ. ಆದ್ದರಿಂದ ಸೋತರು ಕೂಡ ನೀವು ಸಮಾನ ಮನಸ್ಸಿನಿಂದ ಗೆದ್ದವರಿಗೆ ಶುಭಾಶಯ ತಿಳಿಸಿ ಸೋಲು– ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕ್ರೀಡಾಪಟುಗಳಿಗೆ ಹುರುಪು ತುಂಬಿದರು.
ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶಂಕರಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಕ್ರೀಡೆ ಆಗಿದೆ ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಸವರಾಜು, ಬಿ.ಆರ್.ಸಿ.ವೆಂಕಟೇಶ್, ನಿವೃತ್ತ ದೈಹಿಕ ಶಿಕ್ಷಕರಾದ ಹನುಮಂತ ರಾಯಪ್ಪ, ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಕ್ರೀಡಾಭಿಮಾನಿಗಳು ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296