ಪಾವಗಡ: ತಾಲ್ಲೂಕಿನಲ್ಲಿ ಆರೋಗ್ಯ ಶಿಕ್ಷಣ ಮತ್ತು ಉದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಬದಲಾವಣೆ ಬೇಕಾಗಿದೆ ಎಂದು ಹೈಕೋರ್ಟ್ ವಕೀಲ ಹರಿರಾಮ್ ತಿಳಿಸಿದರು.
ತಾಲ್ಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಭಾರತೀಯ ಪರಿವರ್ತನ ಸಂಘ, ನಿಸರ್ಗ ದೃಷ್ಠಿಧಾಮ, ಬೆಂಗಳೂರುರವರ ಸಹಯೋಗದಲ್ಲಿ ಹರಿರಾಮ್ ರವರ ಹುಟ್ಟುಹಬ್ಬದ ಅಂಗವಾಗಿ ಮಂಗಳವಾರದಂದು ಹಮ್ಮಿಕೊಂಡಿದ್ದ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಬಹುತೇಕ ಯುವಕರು ಉದ್ಯೋಗ ಗುಳೆ ಹೋಗುತ್ತಿದ್ದಾರೆ. ಸಣ್ಣ ಆರೋಗ್ಯ ಸಮಸ್ಯೆಗೂ ದೂರದ ನಗರಗಳಿಗೆ ಹೋಗಬೇಕಾದ ಸ್ಥಿತಿ ಇದೆ. ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಎಂಬುದು ಮರೀಚಿಕೆಯಾಗುತ್ತಿದೆ. ಇದೆಲ್ಲವೂ ಬದಲಾಗಬೇಕು ಎಂದರು.
ಪತ್ರಿಕೆಯವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ನಾನು ಸದ್ಯಕ್ಕೆ ರಾಜಕೀಯ ಪ್ರವೇಶದ ಚಿಂತನೆಯಲ್ಲಿ ಇಲ್ಲ. ಕೆಲವು ಸಂದರ್ಭದಲ್ಲಿ ಜನತೆಯ ಅಭಿಲಾಷೆಗಳಿಗೆ ಮತ್ತು ಒತ್ತಾಯಗಳಿಗೆ ಸ್ಪಂದಿಸಬೇಕಾಗುತ್ತದೆ. ತಾಲ್ಲೂಕಿನ ಜೀವನ ಮಟ್ಟ ಉತ್ತಮಗೊಳ್ಳಬೇಕಾದರೆ ಜನಾಭಿಪ್ರಾಯ ಮುಖ್ಯವಾಗುತ್ತದೆ ಎಂದರು.
ಶಿಬಿರದಲ್ಲಿ ಸುಮಾರು 157 ಜನರ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಮಾಡಲಾಯಿತು. ಡಾ.ದೇವರಾಜ್ ನಾಯ್ಕರವರ ವೈದ್ಯರ ತಂಡ, ಸಂಘದ ಕೆಂಚರಾಯ, ಅಶೋಕ, ನಾಗರಾಜು, ಮಧು, ಸುಬ್ಬರಾಯಪ್ಪ ಹಾಗೂ ಜೈ ಯುವಕ ಸೇವಾ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296