ಶಿವಮೊಗ್ಗ: ಬಿ.ವೈ.ವಿಜಯೇಂದ್ರ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಯತ್ನಾಳ್ ಆರೋಪಕ್ಕೆ ಬಿಜೆಪಿಯವರು ಮೊದಲು ಉತ್ತರ ಕೊಡಲಿ ಅಂತ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಹ ಹೋರಾಟ ಮಾಡುತ್ತೇವೆ. ನ್ಯಾಯಾಂಗ ಹೋರಾಟ ಮಾಡುತ್ತೇವೆ. ಬಿಜೆಪಿಯವರ ವಿರುದ್ದ ಜನರ ಬಳಿ ಹೋಗುತ್ತೇವೆ. ಅವರ ಕಾಲದಲ್ಲಿ 25 -– 30 ಹಗರಣ ನಡೆದಿವೆ ಅದನ್ನು ಜನರ ಮುಂದೆ ತಿಳಿಸುತ್ತೇವೆ ಎಂದು ಅವರು ಹೇಳಿದರು.
ಮುಡಾ ಹಗರಣ ನಡೆದಾಗ ಬಿಜೆಪಿಯವರೇ ಅಧ್ಯಕ್ಷರಾಗಿದ್ದರು. ಅವರ ಪಕ್ಷದ ಶಾಸಕರೇ ಇದ್ದರು. ಮುರುಗೇಶ ನಿರಾಣಿ, ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಆ ಪ್ರಕರಣ ಏನಾಯ್ತು? ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಎಂದು ಯತ್ನಾಳ್ ಆರೋಪ ಮಾಡಿದ್ದಾರೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಾಃ ಕಾರಣ ಹೋರಾಟ ಮಾಡುತ್ತಿದ್ದಾರೆ. 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಬಿಜೆಪಿಯವರಿಗೆ ಇದು ಸಹಿಸಲಾಗುತ್ತಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


