ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಮೇಗಳಪಾಳ್ಯ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕೇಂದ್ರೀಯ ಪಠ್ಯಕ್ರಮದ ಎಡಿಪೈ ಶಾಲೆಯ ಕಟ್ಟಡ ನಿರ್ಮಾಣದ ಭೂಮಿಪೂಜೆ ಭಾನುವಾರದಂದು ನೆರವೇರಿತು.
ನೇಕಾರ ಎಜುಕೇಷನ್ ಟ್ರಸ್ಟ್ ನ ವತಿಯಿಂದ ಸ್ಥಾಪನೆಗೊಳುತ್ತಿರುವಈ ಶಾಲೆಯು ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಬೇಕು ಎಂದು ನ್ಯಾಯಾಧೀಶರಾದ ಜೆ.ಎ.ಮಂಜುನಾಥ ತಿಳಿಸಿದರು.
ಶಾಲೆ ಕಟ್ಟುವುದು ಸುಲಭ ಆದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಟ್ಟು ಉತ್ತಮ ಜ್ಞಾನವಂತರನ್ನಾಗಿಸುವುದು ಶ್ರಮದ ವಿಷಯ. ಈ ಕಾರ್ಯದದಲ್ಲಿ ಟ್ರಸ್ಟಿನ ಎಲ್ಲಾ ಪದಾಧಿಕಾರಿಗಳು ಯಶಸನ್ನು ಸಾಧಿಸಲಿ ಎಂದು ಹಾರೈಸುತ್ತೇನೆ ಎಂದರು.
ಶ್ರೀ ಚೌಡೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಉಮೇಶ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿಬೆಳೆಸುವುದು ಸುಲಭದ ಮಾತಲ್ಲ. ಗೆಳೆಯರು ಆ ಕಾರ್ಯಕ್ಕೆ ಕೈಹಾಕಿ ಶ್ರಮಿಸುತ್ತಿದ್ದಾರೆ. ನಮ್ಮ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಎಡಿಫೈ ಶಿಕ್ಷಣ ಸಂಸ್ಥೆಯ ಅಭಿಷೇಕ್ ಶರ್ಮ ಮಾತಾನಾಡಿ ಈ ಪ್ರದೇಶವು ಶಾಲೆಯ ರಚನೆಗೆ ಸೂಕ್ತವಾಗಿದ್ದು, ಪರಿಸರದ ನಡುವೆ ವಿದ್ಯಾರ್ಜನೆ ಉತ್ತಮವಾಗಿರುತ್ತದೆ ಎಂದರು.
ನೇಕಾರ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಜಿ.ಬಿ.ಸತ್ಯನಾರಾಯಣ, ಕಾರ್ಯದರ್ಶಿ ಪಿ.ಸಿ.ಗೋಪಿ, ನಿರ್ದೇಶಕರಾದ ಜಿ.ಆರ್.ಗುಂಡಪ್ಪ, ಬಿ.ಮಲ್ಲಿಕಾರ್ಜುನ, ಬಂಡಿ ವೆಂಕಟೇಶ, ನಾಗಭೂಷಣ, ಜಿ.ಎ.ಬಾಲಾಜಿ, ಬಿ.ಎನ್.ನಾಗರಾಜು, ಗೋಪಿನಾಥ್, ಆರ್ಕಿಟೆಕ್ ವೇಣುಗೋಪಾಲ್ ಸೇರಿದಂತೆ ಮಹಿಳೆಯರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296