nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ, ಪರಿಸರ ಮಾಲಿನ್ಯ ತಪ್ಪಿಸಿ: ಡಾ.ಎಚ್.ಕೆ.ಎಸ್.ಸ್ವಾಮಿ ಕರೆ
    ತುಮಕೂರು August 12, 2024

    ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ, ಪರಿಸರ ಮಾಲಿನ್ಯ ತಪ್ಪಿಸಿ: ಡಾ.ಎಚ್.ಕೆ.ಎಸ್.ಸ್ವಾಮಿ ಕರೆ

    By adminAugust 12, 2024No Comments3 Mins Read
    thumakur 2

    ತುಮಕೂರು: ಮುಂಬರಲಿರುವ ಗಣೇಶನ ಹಬ್ಬದಲ್ಲಿ ಪರಿಸರಸ್ನೇಹಿ ಗಣಪತಿಗಳನ್ನು ಇಟ್ಟು, ಪೂಜಿಸಿ, ಕೆರೆಕಟ್ಟೆಗಳನ್ನ ಸಂರಕ್ಷಿಸಿ, ಯಾವುದೇ ವಾಯುಮಾಲಿನ್ಯ, ಜಲ ಮಾಲಿನ್ಯ, ಮಣ್ಣಿನ ಮಾಲಿನ್ಯ, ಮಾಡದಂತೆ ದೇವರನ್ನು ಪ್ರಾರ್ಥಿಸಿ, ಪರಿಸರದ ಜೊತೆಗೆ ನಮ್ಮ ಹಬ್ಬಗಳು ಸಹ ಸಾಗಲಿ ಎಂದು ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಮತ್ತು ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷರಾದ ಡಾ.ಎಚ್.ಕೆ.ಎಸ್. ಸ್ವಾಮಿ ಹಾರೈಸಿದ್ದಾರೆ.

    ಬರಲಿರುವ ಗಣೇಶನ ಹಬ್ಬಕ್ಕೆ ಈಗಾಗಲೇ ಬಣ್ಣ ಬಣ್ಣದ ವೈವಿಧ್ಯಮಯವಾದ ಗಣಪತಿಗಳನ್ನ ಕಲಾವಿದರು ತಯಾರು ಮಾಡಿ ಇಟ್ಟಿದ್ದಾರೆ, ಒಂದೇ ಸಾರಿ ಅವು ಮಾರುಕಟ್ಟೆಗೆ ಬಂದು ಲಗ್ಗೆ ಹಾಕುತ್ತವೆ. ಅದರಲ್ಲಿ ಬೇಕಾದಷ್ಟು ಬಣ್ಣಗಳನ್ನ ಹಚ್ಚಿ, ಅವು ಕೆಲವು ರಾಸಾಯನಿಕಗಳು ಇರಬಹುದು, ಇನ್ನೂ ಕೆಲವು ನೈಸರ್ಗಿಕವಾಗಿರಬಹುದು. ಅವೆರಡರ ವ್ಯತ್ಯಾಸ ತಿಳಿಯದಲೇ ಜನ ರಾಸಾಯನಿಕ ಇರುವ ಗಣಪತಿಗಳನ್ನೇ ಕೊಂಡು ಪೂಜೆ ಮಾಡಿ, ಒಂದೇ ದಿವಸದಲ್ಲಿ ಅಥವಾ ಮೂರನೇ ದಿವಸದಲ್ಲಿ ಸುತ್ತಮುತ್ತಲಿರುವ ಕೆರೆಗಳಿಗೆ, ನದಿಗಳಿಗೆ, ಸಮುದ್ರಗಳಿಗೆ ಬಿಡುತ್ತಿರುವುದರಿಂದ ನೀರಿನಲ್ಲಿ ಬಣ್ಣಗಳು ಕರಗಿ ಅಲ್ಲಿರುವ ಜಲಪ್ರಾಣಿಗಳಿಗೆ ವಿಷವಾಗಿ, ಅವುಗಳು ಸಾವನ್ನಪ್ಪುವುದನ್ನು ನಾವು ತಡೆಯಬೇಕು ಎಂದರು.


    Provided by
    Provided by

    ಹಬ್ಬ ಮಾಡುವ ಸಡಗರದಲ್ಲಿ ಹುಡುಗರು ಬಣ್ಣ ಬಣ್ಣದ ಗಣಪತಿಗಳನ್ನು ಇಟ್ಟು ಪೂಜಿಸಬೇಕೆಂಬ ಆಸೆಯನ್ನು ಹೊಂದಿರುತ್ತಾರೆ. ಅವರಿಗೆ ಪರಿಸರಸ್ನೇಹಿ, ಬಣ್ಣಗಳನ್ನ ಲೇಪನ ಮಾಡದಂತ ಗಣಪತಿಗಳನ್ನು ನೀಡಬೇಕು. ಸಾಧ್ಯವಾದರೆ ಹಿರಿಯರು ಅವರಿಗೆ ಮನದಟ್ಟು ಮಾಡಿಕೊಟ್ಟು, ಬಣ್ಣ ರಯಿತವಾದ, ಸರಳವಾದ ಮಣ್ಣಿನ ಗಣಪತಿಯನ್ನ ಪೂಜಿಸಿ, ಅದನ್ನ ಮತ್ತೆ ಮಣ್ಣಿಗೆ, ನೀರಿಗೆ ವಾಪಸ್ ಬಿಟ್ಟರೆ, ಪರಿಸರ ಸುಂದರವಾಗಿರುತ್ತದೆ ಎಂಬುದನ್ನು ಮನದಟ್ಟು ಮಾಡಿಕೊಳ್ಳಲು ಸಹಕಾರಿಯಾಗಿದೆ. ಆದರೆ ನಾವು ಒಮ್ಮೆ, ನಮ್ಮ ಮಿತಿಮೀರಿ, ಅತಿಯಾದ ಹೆಚ್ಚು ಬಣ್ಣಗಳಿಂದ, ಅತಿ ಎತ್ತರದ ಗಣಪತಿಗಳನ್ನು ಅಥವಾ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರದ ಗಣಪತಿಗಳನ್ನು ಪೂಜಿಸಿ, ನೀರಿಗೆ ಬಿಟ್ಟು, ಜಲ ಮಾಲಿನ್ಯ, ಮಣ್ಣಿನ ಮಾಲಿನ್ಯ ಮಾಡುತ್ತಿದ್ದೇವೆ, ಇದರ ಬಗ್ಗೆ ಜಾಗೃತಿ ಸಾಲದಾಗಿದೆ, ಇನ್ನು ಹೆಚ್ಚಿನ ಮಟ್ಟದ ಜಾಗೃತಿಯನ್ನು ಮೂಡಿಸಿ, ಜನರಲ್ಲಿ ಪರಿಸರಸ್ನೇಹಿ ಹಬ್ಬಗಳ ಆಚರಣೆ ಬಗ್ಗೆ ಮನದಟ್ಟು ಮಾಡಿಕೊಡಲು ಸಂಘ ಸಂಸ್ಥೆಗಳು, ಸರ್ಕಾರದ ಇಲಾಖೆಗಳು, ಪೋಲೀಸ್ ಇಲಾಖೆ, ಮಾಲಿನ್ಯ ಇಲಾಖೆ, ಇನ್ನು ಹೆಚ್ಚಿನ ಮಟ್ಟದ ಶ್ರಮವಹಿಸಬೇಕಾಗಿದೆ ಎಂದರು.

    ಬಹಳಷ್ಟು ಕಡೆ ಪರಿಸರಸ್ನೇಹಿ ಗಣಪತಿಯೆಂದರೆ ಜನರಿಗೆ ಅರಿವೇ ಇಲ್ಲದಂತಾಗಿದೆ, ಬಣ್ಣ ಇಲ್ಲದ್ದು, ಬಣ್ಣ ಇರುವಂತದ್ದು ಯಾವುದರಲ್ಲಿ ಪರಿಸರ ಹೆಚ್ಚು ಕಾಣುತ್ತದೆ ಎಂಬುದನ್ನು ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳು, ಜನ ಸಂಘಟನೆಗಳು, ಅರ್ಥ ಮಾಡಿಕೊಂಡು, ಕೇವಲ ಬರಿ ಮಣ್ಣಿನಿಂದ ಮಾಡಿದಂತಹ, ಅದ್ಭುತವಾದ ವಿಗ್ರಹಗಳನ್ನು ಪ್ರದರ್ಶನಕ್ಕೆ ಇಟ್ಟು, ಸಾವಿರಾರು ಜನರ ಭಕ್ತಾದಿಗಳಿಗೆ ಮನಸ್ಸಿನಲ್ಲಿ ಪರಿಸರ ಜಾಗೃತಿ ಮೂಡಿಸಲು ಈ ಪರಿಸರ ಹಬ್ಬಗಳು. ಗಣೇಶನ ಹಬ್ಬ ಇರಬಹುದು, ದೀಪಾವಳಿ ಇರಬಹುದು, ಇವೆಲ್ಲವನ್ನೂ ನಾವು ಹೇಗೆ ಮಾಡಬೇಕು, ಜಾಗೃತಿ ಮೂಡಿಸುವುದೇ ಹಬ್ಬಗಳ ಉದ್ದೇಶವಾಗಿದೆ. ದೇವರನ್ನ ನೆಪ ಮಾಡಿಕೊಂಡು, ಪರಿಸರ ಸ್ನೇಹಿ ಜೀವನ ಮಾಡುವುದನ್ನು ಜನರಿಗೆ ಹೇಳಿಕೊಡಬೇಕಾಗಿದೆ. ಪರಿಸರವೇ ದೇವರು, ಈಗಾಗಲೇ ನಮಗೆ ಪರಿಸರದಿಂದ ಆಗುವ ಅನಾಹುತಗಳಿಂದ, ಜೀವ ಹಾನಿ ಮಾಡಿಕೊಂಡು, ಮಳೆ ಬಂದರೆ ನಡುಗಿ, ಹೆದರಿ, ಆಗುವ ಅನಾವುತಗಳಿಂದ, ಜೀವ ಹಾನಿ ಮಾಡುವುದನ್ನ, ನಾವು ನೋಡಿದ್ದೇವೆ. ಹಾಗಾಗಿ ಎಲ್ಲೇ ಆಗಲಿ, ಮಣ್ಣಿನ ಸವಕಳಿಯಾಗದಂಗೆ, ನೀರಿನ ಮಾಲಿನ್ಯಾಗದಂತೆ, ಸಂರಕ್ಷಿಸಿಕೊಂಡು, ಹಬ್ಬ ಆಚರಿಸುವುದು ಮುಖ್ಯವಾಗಬೇಕು. ಇದನ್ನು ನಾವು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಪರಿಸರಸ್ನೇಹಿ ಗಣೇಶನ ಹಬ್ಬದಲ್ಲಿ, ಪ್ಲಾಸ್ಟಿಕ್ ಅನ್ನು ಕಡಿಮೆ ಬಳಕೆ ಮಾಡಿ, ಅವುಗಳನ್ನ ನೀರಿಗೆ ಬಿಡದಂತೆ ಎಚ್ಚರಿಕೆವಹಿಸಿ, ಮರುಬಳಕೆ ಆಗುವಂಥ ವಸ್ತುಗಳನ್ನೇ ಬಳಕೆ ಮಾಡಿ, ಗಣೇಶನ ತರುವುವಾಗ, ಬಿಡುವಾಗ, ಪಟಾಕಿ ಹಚ್ಚಿದಂತೆ ಮಾಡಿ, ಶಬ್ದ ಮಾಲಿನ್ಯವನ್ನು ಸಹ ಹೆಚ್ಚಾಗಿ ಮಾಡದಂತೆ, ಸುತ್ತಮುತ್ತಲಿರುವ ಜನರನ್ನ, ಅವರ ನೆಮ್ಮದಿಯನ್ನ ಕಾಪಾಡಿಕೊಂಡು, ಎಲ್ಲ ಜಾತಿ ಮತ ಭೇದವನ್ನು ಮರೆತು, ಜನರನ್ನ ಸಂಘಟಿಸಿ, ಆದೇ ವ್ಯಕ್ತಿಗಳನ್ನ ರಚನಾತ್ಮಕ ಕಾರ್ಯಕ್ರಮಗಳಿಗೆ ಬಳಸಿ, ಪರಿಸರ ಉಳಿಸಿ, ನೆಮ್ಮದಿಯ ಜೀವನ ಸಾಗಿಸಿ ಎಂಬುದೇ ಈ ಹಬ್ಬಗಳ ಸಂದೇಶ. ಇದನ್ನ ನಾವು ಜನರಿಗೆ, ತಳಮಟ್ಟದಿಂದ, ಎತ್ತರದ ಮಟ್ಟದವರೆಗೂ ಸಹ ತೆಗೆದುಕೊಂಡು ಹೋಗುವಂತಹ ಜವಾಬ್ದಾರಿಯನ್ನ, ಪ್ರತಿಯೊಬ್ಬರು ತೆಗೆದುಕೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆ ಮುಖಾಂತರ ವಿನಂತಿಸಿಕೊಂಡಿದ್ದಾರೆ.

    ಬಹಳಷ್ಟು ಜನ ವಿದ್ಯಾರ್ಥಿಗಳಿಗೆ ಗಣಪತಿಯನ್ನು ಇಟ್ಟು ಪೂಜೆ ಮಾಡಿ, ಸಾಂಸ್ಕೃತಿಕ ಚಟುವಟಿಕೆಗಳನ್ನ ಮಾಡಿ, ಹಾಡು, ನೃತ್ಯ, ನಾಟಕ, ಹರಿಕಥೆ, ವಸ್ತು ಪ್ರದರ್ಶನ, ಕೋಲಾಟ, ರಂಗೋಲಿ ಸ್ಪರ್ಧೆ, ಗಾಯನ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಇಂತಹ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹಬ್ಬಗಳು ಸಹಕಾರಿಯಾಗಿದೆ. ಹಾಗಾಗಿ ಗಣೇಶನ ಮುಂದಿಟ್ಟುಕೊಂಡು, ಬಹಳಷ್ಟು ಸಾಮಾಜಿಕ ಸುಧಾರಣೆಗಳನ್ನ ಮಾಡಬಹುದು. ಗಣೇಶನ ಮಂಟಪದಲ್ಲಿ ಹಾಕಿರೋ ಮೈಕ್ ಸೆಟ್ ಗಳ ಮುಖಾಂತರ, ಒಳ್ಳೊಳ್ಳೆ ಭಾಷಣಗಳನ್ನ, ಹಾಸ್ಯ ಸಾಹಿತಿಗಳನ್ನ, ಕಲಾವಿದರನ್ನು ಪ್ರೋತ್ಸಾಹಿಸಿ, ಒಂದು ಸುಂದರ ಸಮಾಜವನ್ನು ನಿರ್ಮಾಣ ಮಾಡಲು, ಈ ಹಬ್ಬಗಳು ಸಹಕಾರಿಯಾಗಿವೆ. ಎಲ್ಲ ಜಾತಿ ಧರ್ಮ ಮತದವರನ್ನು, ಒಗ್ಗೂಡಿಸಿಕೊಂಡು, ಮನಸ್ಸಿನಲ್ಲಿ ನೆಮ್ಮದಿ ಮೂಡುವಂತಹ ವಿಚಾರಗಳನ್ನು ತಲುಪಿಸಿ, ಸಾಮಾಜಿಕ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಹಬ್ಬಗಳು ಆಚರಣೆಯಾಗಲಿ. ಮಕ್ಕಳು ಮಣ್ಣನ್ನ ಮುಟ್ಟಿ, ಕೈಯಿಂದಲೇ ಗಣೇಶನ ಮಾಡಿ, ಪೂಜಿಸಿ, ದುಂದು ವೆಚ್ಚ ಮಾಡದಂತೆ, ಸರಳವಾಗಿ ಹೆಚ್ಚಿನ ಮಟ್ಟದ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿ, ಹಬ್ಬಗಳನ್ನ ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.