nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಕಿವಿ ಮಾತು
    ತುಮಕೂರು August 13, 2024

    ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ: ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಕಿವಿ ಮಾತು

    By adminAugust 13, 2024No Comments2 Mins Read
    shubha kalyan

    ತುಮಕೂರು: ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ. ಶ್ರದ್ಧೆ ಮತ್ತು  ಏಕಾಗ್ರತೆ ಇದ್ದರೆ ಎಲ್ಲವೂ ಸಾಧ್ಯ. ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಲು ಕಠಿಣ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    ಜಿಲ್ಲೆಯ ಕುಣಿಗಲ್ ತಾಲ್ಲೂಕು ಭಕ್ತರಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ(ಪ.ಜಾ)ಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ಮತ್ತು ವಿಷಯ ಗ್ರಹಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಏರ್ಪಡಿಸಿ ಪಠ್ಯಾಭ್ಯಾಸ ಮಾಡಿಸಬೇಕು ಎಂದು ಶಿಕ್ಷಕರಿಗೆ ಸೂಚನೆ ನೀಡಿದರಲ್ಲದೇ, ಶಾಲೆಯ ಆಡಳಿತಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸದ ಶಾಲಾ ಮುಖ್ಯಸ್ಥರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.


    Provided by
    Provided by

    ನಂತರ ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊತ್ತಗೆರೆ ನಾಡ ಕಚೇರಿ, ಕುಣಿಗಲ್ ಪಟ್ಟಣದ ಮಹಾತ್ಮ ಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ   ವಿವಿಧ ಸ್ಥಳಗಳಿಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ  ಕರ್ತವ್ಯಕ್ಕೆ ಗೈರು ಹಾಜರಾದ ವೈದ್ಯರಿಗೆ ಶೋಕಾಸ್ ನೋಟೀಸ್ ನೀಡಲು  ಕ್ರಮಕೈಗೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಡಿ. ಎನ್. ಮಂಜುನಾಥ್ ಅವರಿಗೆ ದೂರವಾಣಿ ಮೂಲಕ ಸೂಚಿಸಿದರು.

    ನಂತರ ಕೊತ್ತಗೆರೆ ಗ್ರಾಮದ ನಾಡ ಕಚೇರಿಗೆ ಭೇಟಿ ನೀಡಿದ ಅವರು ಪಹಣಿಗೆ ಆಧಾರ್ ಜೋಡಣೆ, ಮರಣ ಪ್ರಮಾಣ ಪತ್ರ, ಪಿಂಚಣಿ ವಿತರಣೆ, ಪೌತಿ ಖಾತೆ ಅರ್ಜಿಗಳನ್ನು ವಿಲೇವಾರಿ  ಮಾಡಿರುವ ಬಗ್ಗೆ ಗ್ರಾಮ ಲೆಕ್ಕಾಧಿಕಾರಿ ಶಿಲ್ಪ ಅವರಿಂದ ಮಾಹಿತಿ ಪಡೆದು, ಪೌತಿ ಖಾತೆ ಆಂದೋಲನದಲ್ಲಿ ವಾರಸುದಾರರು ಪೌತಿ ಖಾತೆಗೆ ಅಗತ್ಯವಿರುವ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪಹಣಿ ಪತ್ರಗಳನ್ನು ಒದಗಿಸಿದಲ್ಲಿ ೧೫ ದಿನಗಳೊಳಗಾಗಿ ಪೌತಿ ಖಾತೆ ಬದಲಾವಣೆ ಮಾಡಿಕೊಡಬೇಕೆಂದು ಸೂಚನೆ  ನೀಡಿದರು.

    ಮಹಾತ್ಮ ಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ೧೦ನೇ ತರಗತಿ ಕೊಠಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹಾಜರಾತಿ ಪರಿಶೀಲಿಸಿದ ಅವರು  ಗೈರು ಹಾಜರಾಗಿದ್ದ ೧೩ ವಿದ್ಯಾರ್ಥಿಗಳ ಬಗ್ಗೆ  ಮಾಹಿತಿ ನೀಡದ  ಶಿಕ್ಷಕರನ್ನು  ತರಾಟೆಗೆ ತೆಗೆದುಕೊಂಡು, ವಿದ್ಯಾರ್ಥಿಗಳ ಹಾಜರಾತಿ ಬಗ್ಗೆ ನಿಗಾ ವಹಿಸಬೇಕೆಂದು ತಿಳಿಸಿದರು.

    ಬಳಿಕ ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಅವರು  ಹೊರರೋಗಿ ಚೀಟಿ ವಿತರಣಾ ಕೇಂದ್ರ, ಪ್ರಸವಪೂರ್ವ ಹಾಗೂ ಪ್ರಸವ ನಂತರದ ವಾರ್ಡು, ಐಸಿಯು, ಇಎನ್‌ಟಿ, ವಿಶೇಷ ಚಿಕಿತ್ಸಾ ಘಟಕ, ಶಸ್ತಚಿಕಿತ್ಸಾ ಕೊಠಡಿ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ತಾಯಿ ಮತ್ತು ಮಕ್ಕಳ ಆರೋಗ್ಯ ವಿಚಾರಿಸಿದರು. ಪ್ರಕರಣಗಳ ದಾಖಲು ವಹಿ ಪರಿಶೀಲಿಸುತ್ತಾ ನವಜಾತ ಶಿಶುಗಳಲ್ಲಿ ಜಾಂಡೀಸ್ ಕಂಡು ಬಂದರೆ ಫೋಟೋಥೆರಪಿ ಚಿಕಿತ್ಸೆ ನೀಡುವ ಬಗ್ಗೆ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್ ಬಾಬು ಅವರಿಂದ ಮಾಹಿತಿ ಪಡೆದರು.

    ನಂತರ ಪತ್ರಕರ್ತರೊಂದಿಗೆ  ಮಾತನಾಡಿದ ಅವರು ಆಸ್ಪತ್ರೆಯಲ್ಲಿ ಸಿಬ್ಬಂದಿ ವರ್ಗದ ಕೊರತೆ ಇದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ತಾಲ್ಲೂಕಿನಲ್ಲಿ ನಗು-ಮಗು ಆ್ಯಂಬುಲೆನ್ಸ್ ವಾಹನ ವ್ಯವಸ್ಥೆ ಮಾಡಬೇಕೆಂದು ಆಡಳಿತ ವೈದ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು.

    ಆಸ್ತಿ ತೆರಿಗೆ ಸಂಗ್ರಹದಲ್ಲಿ ಹಿಂದುಳಿದ ಪುರಸಭೆ :

    ಕುಣಿಗಲ್ ಪುರಸಭೆಯು ಆಸ್ತಿ ತೆರಿಗೆ ಸಂಗ್ರಹದಲ್ಲಿ ಹಿಂದುಳಿದಿದ್ದು, ಮುಂದಿನ ಒಂದು ವಾರದೊಳಗೆ ಆಸ್ತಿ ತೆರಿಗೆ ಸಂಗ್ರಹದಲ್ಲಿ ಪ್ರಗತಿ ಸಾಧಿಸಬೇಕೆಂದು  ಮುಖ್ಯಾಧಿಕಾರಿ ಶಿವ ಪ್ರಸಾದ್ ಅವರಿಗೆ ಸೂಚನೆ ನೀಡಿದರು.

    ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ:

    ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ನಿರಂತರವಾಗಿ ಸ್ವಚ್ಛತೆ ಕಾಪಾಡುವ ಮೂಲಕ  ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಲು ಎಲ್ಲರ ಸಹಕಾರ ಇರಬೇಕು. ಡೆಂಗಿ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ಸಾರ್ವಜನಿಕರು ಉದಾಸೀನ ಮಾಡದೆ ಸರ್ಕಾರಿ ಆಸ್ಪತ್ರೆಯಲ್ಲಿ  ರಕ್ತದ ಮಾದರಿಯನ್ನು ಪರೀಕ್ಷೆ ಮಾಡಿಸಿ ಡೆಂಗ್ಯೂ ದೃಢಪಟ್ಟಲ್ಲಿ ತಪ್ಪದೇ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿದರು.

    ಈ ಸಂದರ್ಭ ತಹಶೀಲ್ದಾರ್ ರಶ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಬೋರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.