ತುಮಕೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಚ್ಚಿನಿಂದ ಹೊಡೆದು ಮಗನಿಂದಲೇ ತಂದೆಯ ಭೀಕರ ಕೊಲೆ ನಡೆದಿರೋ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೆಂಕಟಪ್ಪ (75), ಕೊಲೆಯಾದ ದುರ್ದೈವಿಯಾಗಿದ್ದಾನೆ.ಸಿದ್ದಪ್ಪ (45), ತಂದೆಯನ್ನ ಕೊಲೆಗೈದ ಪಾಪಿ ಮಗನಾಗಿದ್ದಾನೆ.
ಮೂರೂವರೆ ಎಕರೆ ಆಸ್ತಿ ಹೊಂದಿದ್ದ ವೆಂಕಟ್ಟಪ್ಪ, ಇತ್ತಿಚೆಗೆ ಜಮೀನು ಮಾರಾಟ ಮಾಡಿದ್ದನು. ಮಾರಾಟ ಮಾಡಿದ್ದ ಜಮೀನಿನ 25 ಲಕ್ಷ ಹಣವನ್ನ ಮಗಳಿಗೆ ಕೊಟ್ಟಿದ್ದನು ಹಾಗೂ ಜಮೀನನ್ನು ಸಹ ಮಗಳ ಹೆಸರಿದೆ ಬರೆದುಕೊಟ್ಟಿದ್ದ ಎನ್ನಲಾಗಿದೆ.
ಇದೇ ವಿಚಾರಕ್ಕೆ ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು.
ನ್ಯಾಯ ಪಂಚಾಯತಿ ಮಾಡಿದ್ರು ಸಹ ಮಗನಿಗೆ ಆಸ್ತಿ, ಹಣ ನೀಡಲು ತಂದೆ ವೆಂಕಟಪ್ಪ, ಹಿಂದೇಟು ಹಾಕಿದ್ದನು. ಇದರಿಂದ ಬೇಸತ್ತು ತಂದೆಯನ್ನ ಮಗ ಸಿದ್ದಪ್ಪ, ತಲೆಗೆ ಮಚ್ಚಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿ ಪರಾರಿ ಆಗಿದ್ದಾನೆ.
ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ ಹಾಗೂ ಕೋಳಾಲ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಮಗ ಸಿದ್ದಪ್ಪನಿಗಾಗಿ ಪೊಲೀಸರಿಂದ ಮುಂದುವರಿದ ಹುಡುಕಾಟ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296