ಪಾವಗಡ: ಭಾರತದ 78ನೇಯ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರೆಕೊಟ್ಟಿರುವ ಹರ್ ಗರ್ ತಿರಂಗ ಅಭಿಯಾನದ ಪ್ರಯುಕ್ತ ಬುಧವಾರ ಮಧ್ಯಾಹ್ನ ಒಂದು ಗಂಟೆಯ ಸಂದರ್ಭದಲ್ಲಿ ಪಾವಗಡ ಪಟ್ಟಣದ ತುಮಕೂರು ರಸ್ತೆಯಲ್ಲಿರುವಂತಹ ಭಾರತೀಯ ಜನತಾ ಪಕ್ಷದ ಮಂಡಲ ಕಚೇರಿಯ ಬಳಿ ತಾಲೂಕು ಬಿಜೆಪಿ ಅಧ್ಯಕ್ಷ ರಂಗಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ 78ನೇ ಸ್ವತಂತ್ರ ದಿನೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಅಂತಹ ಸುಸಂದರ್ಭದಲ್ಲಿ ಭಾರತದ ಐಕ್ಯತೆಯ ಬಗ್ಗೆ ಮತ್ತು ಭಾರತ ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನ ನೆನೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿ ದೇಶಭಕ್ತಿಯ ದ್ವೀಪವನ್ನು ಉಜ್ವಲಿಸುವ ನಿಟ್ಟಿನಲ್ಲಿ ಮನೆಮನೆಗಳ ಮೇಲೆ ತಿರಂಗ ಧ್ವಜವನ್ನು ಹಾರಿಸಲು ಸರ್ಕಾರ ಕರೆ ಕೊಟ್ಟಿದ್ದು, ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಮನವಿ ಮಾಡಿಕೊಂಡರು
ಬೈಕ್ ರ್ಯಾಲಿಯು ಪಟ್ಟಣದ ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಶನಿ ಮಹಾತ್ಮ ವೃತ್ತ ಸೇರಿದಂತೆ ವಿವಿಧ ರಸ್ತೆಗಳಲ್ಲಿ ನಡೆಸಲಾಗಿದೆ
ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಆಲ್ಕುಂದಿರಾಜ್, ನವೀನ್ ಸೀತಾರಾಂ, ಶಿವಕುಮಾರ್ ಸಾಕೇಲ್,ರಾಮಾಂಜಿ, ಬ್ಯಾಡನೂರು ಶಿವು, ಬಿಹೊಸಳ್ಳಿನಾಗರಾಜು, ಸೂರಪ್ಪ, ಗಗನ್ ರಾಜ್, ಸೇರಿದಂತೆ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296