nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ರಾಜಣ್ಣರವರಿಂದ ತಳಸಮುದಾಯಗಳಿಗೆ ಪ್ರಾತಿನಿಧ್ಯ ಸಿಕ್ಕಿದೆ: ಸ್ವಾತಂತ್ರ್ಯೋತ್ಸವದಲ್ಲಿ ಆರ್.ರಾಜೇಂದ್ರ ಹೇಳಿಕೆ
    ಮಧುಗಿರಿ August 16, 2024

    ಸಚಿವ ರಾಜಣ್ಣರವರಿಂದ ತಳಸಮುದಾಯಗಳಿಗೆ ಪ್ರಾತಿನಿಧ್ಯ ಸಿಕ್ಕಿದೆ: ಸ್ವಾತಂತ್ರ್ಯೋತ್ಸವದಲ್ಲಿ ಆರ್.ರಾಜೇಂದ್ರ ಹೇಳಿಕೆ

    By adminAugust 16, 2024No Comments2 Mins Read
    rajendra rajanna

    ಮಧುಗಿರಿ: ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ತರುವ ಮೂಲಕ ಸಣ್ಣ ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವಕಾಶ ಕಲ್ಪಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.

    ಪಟ್ಟಣದ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಮಧುಗಿರಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ  ವತಿಯಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ  ಮಾತನಾಡಿದ ಅವರು. ಕೆ. ಎನ್. ರಾಜಣ್ಣನವರು  ಸಹಕಾರಿ ಕ್ಷೇತ್ರದಲ್ಲಿ ತಂದಿರುವ ಮೀಸಲಾತಿ ಇಡೀ ರಾಜ್ಯ ವ್ಯಾಪ್ತಿಗೆ ಅನ್ವಯವಾಗಲಿದ್ದು, ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸಿದೆ ಇದರಿಂದ ಡಾ. ಬಿ. ಆರ್. ಅಂಬೇಡ್ಕರ್ ರವರ ಆಶಯ ಸಾಕಾರಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.


    Provided by
    Provided by

    ರಾಜಣ್ಣ ರವರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ಸಂಕಲ್ಪಿಸಿದ್ದು, ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಅಧಿಕಾರಿಗಳು ಮುತುವರ್ಜಿ ವಹಿಸಿ 18 ಎಕರೆ ಜಾಗ ನಿಗದಿಪಡಿಸಿದ್ದಾರೆ,

    ತಾಲೂಕಿನಲ್ಲಿ 67988 ಫಲಾನುಭವಿಗಳಿಗೆ  ಗೃಹಲಕ್ಷ್ಮಿ ಯೋಜನೆ ಅಡಿ  134 ಕೋಟಿ ರೂಗಳು ಜಮೆ ಆಗಿದೆ.35600 ರೈತರ ಖಾತೆಗಳಿಗೆ ಬೆಳೆ ವಿಮೆ ಯೋಜನೆ ಅಡಿ  26 ಕೋಟಿ ರೂಗಳು ಜಮೆ ಆಗಿದೆ ಎಂದರು.

    ಲೋಕೋಪಯೋಗಿ ಇಲಾಖೆಯ 25 ಕೋಟಿ ರೂಗಳ ಅನುದಾನದಲ್ಲಿ ಮಧುಗಿರಿ ಪಟ್ಟಣವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ,  ತಾಲೂಕಿನ 42 ಕೆರೆಗಳನ್ನು ಸಣ್ಣ ನೀರಾವರಿ ಇಲಾಖೆ ವತಿಯಿಂದ ಸುಮಾರು 268 ಕೋಟಿ ರೂಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ದೊಡ್ಡೇರಿ ಹೋಬಳಿಯ  8 ಕೆರೆಗಳನ್ನು ಎತ್ತಿನಹೊಳೆ ಯೋಜನೆ ಅಡಿ ಪುನಶ್ಚೇತನ ಗೊಳಿಸಲಾಗುವುದು.

    ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ನಡೆಯುವ ಪಥ ಸಂಚಲನದಲ್ಲಿ ಭಾಗವಹಿಸುವ  ವಿದ್ಯಾರ್ಥಿಗಳಲ್ಲಿ ಶಿಸ್ತು ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸರಿಸುಮಾರು 200 ವರ್ಷಗಳಷ್ಟು ಕಾಲ ಭಾರತವನ್ನು ಆಳಿದ ಬ್ರಿಟಿಷರಿಂದ ಮುಕ್ತವಾದ ದಿನವೇ ಆಗಸ್ಟ್ 15. ಕೆಲವು ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಸುದೀರ್ಘ ಹೋರಾಟದ ಫಲವಾಗಿ ಆಗಸ್ಟ್ 15 ರಂದು ಭಾರತವು ಸ್ವಾತಂತ್ರ್ಯವನ್ನು ಗಳಿಸಿತು. ಈ ಸವಿನೆನಪಿಗಾಗಿ ಭಾರತದಾದಂತ್ಯ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ ಎಂದರು.

    ತಹಶೀಲ್ದಾರ್ ಸಿಗ್ಗಬತ್ ವುಲ್ಲ, ತಾ. ಪಂ.ಇಒ ಲಕ್ಷ್ಮಣ್, ಬಿ ಇ ಒ ಹನುಮಂತರಾಯಪ್ಪ,ಡಿವೈಎಸ್ಪಿ  ಎನ್. ಬಿ. ರಾಮಚಂದ್ರಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ  ನಾಗೇಶ್ ಬಾಬು, ಕ. ಸಾ. ಪ. ಅಧ್ಯಕ್ಷೆ  ಸಹನಾ ನಾಗೇಶ್,ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ,ಪುರಸಭೆ ಮಾಜಿ ಅಧ್ಯಕ್ಷರಾದ  ಎನ್. ಗಂಗಣ್ಣ,ಮೊಹಮ್ಮದ್ ಅಯ್ಯೂಬ್, ಸದಸ್ಯರಾದ ಮಂಜುನಾಥ್ಆ ಚಾರ್,ಲಾಲಾ ಪೇಟೆ ಮಂಜುನಾಥ್, ಅಲೀಮ್, ಅಲ್ಪಸಂಖ್ಯಾತರ ನಗರ ಅಧ್ಯಕ್ಷ ಸೈಯದ್ ಅಲಾವುದ್ದೀನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ

    May 29, 2026

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.