nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ

    August 1, 2026

    ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ

    August 1, 2026

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
    • ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಸಿದ್ದರಾಮಯ್ಯ ಪರ ತಿಪಟೂರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
    ತಿಪಟೂರು August 19, 2024

    ಸಿಎಂ ಸಿದ್ದರಾಮಯ್ಯ ಪರ ತಿಪಟೂರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

    By adminAugust 19, 2024No Comments2 Mins Read
    congress

    ತಿಪಟೂರು: ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ತಿಪಟೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.

    ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ತಿಪಟೂರು ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕೋಡಿಸರ್ಕಲ್, ದೊಡ್ಡಪೇಟೆ, ಬಿ.ಹೆಚ್.ರಸ್ತೆ ಮೂಲಕ ನಗರಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಲಾಯಿತು. ತಿಪಟೂರು ತಹಶೀಲ್ದಾರ್ ಪವನ್ ಕುಮಾರ್ ಮನವಿ ಪತ್ರ ಸ್ವೀಕರಿಸಿದರು.

    ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ರಾಜ್ಯಪಾಲ ನೀಡಿರುವ ಪ್ರಾಸಿಕ್ಯೂಷನ್ ದೋಷಪೂರಿತವಾಗಿದೆ. ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯಪಾಲರ ಮೇಲೆ ಒತ್ತಡ ಹೇರಿ, ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಮಾಡಿದ್ದಾರೆ ಎಂದರು.

    ಸಿದ್ದರಾಮಯ್ಯನವರಿಗೆ ತೊಂದರೆಯಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ನಮ್ಮ ಸರ್ಕಾರ 136 ಜನ ಚುನಾಯಿತ ಶಾಸಕರೊಂದಿಗೆ ಆಡಳಿತ ನಡೆಸುತ್ತಿದ್ದು, ಸರ್ಕಾರವನ್ನ ಅಸ್ಥಿರಗೊಳಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

    ನಾವು ಪ್ರಾಣ ಕೊಟ್ಟಾದರೂ ಸರ್ಕಾರದ ರಕ್ಷಣೆಗೆ ಹೋರಾಡುತ್ತೇವೆ, ಭ್ರಷ್ಟ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ಕುತಂತ್ರವನ್ನು ರಾಜ್ಯದ ಮುಂದೆ ಬಯಲುಗೊಳಿಸುತ್ತೇವೆ. ವಾಮಾಮಾರ್ಗದ ಮೂಲಕ ಅಧಿಕಾರ ಹಿಡಿಯಬಹುದು ಎನ್ನುವ ಕೇಂದ್ರದ ಬಿಜೆಪಿ ನಾಯಕರ ಯೋಜನೆ ಕೈಗೂಡಲು ಬಿಡುವುದಿಲ್ಲ. ಇಂಡಿಯಾ ನಾಯಕರು ಎಲ್ಲರೂ ಸಿದ್ದರಾಮಯ್ಯನವರ ಪರವಾಗಿ ಬೆಂಬಲಕ್ಕೆ ನಿಂತಿದ್ದು ರಾಜ್ಯದ ನಾಯಕರೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ, ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಆದ್ದರಿಂದ ಅವರಿಗೆ ತೊಂದರೆಯಾಗಲು ಬಿಡುವುದಿಲ್ಲ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುವುದನ್ನು ಬಿಟ್ಟು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಾಡೇನೂರು ಕಾಂತರಾಜು ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಪಾಲರನ್ನ ದುರ್ಬಳಕೆ ಮಾಡಿಕೊಂಡು ಸಂವಿಧಾನ ಬದ್ಧವಾದ ಸರ್ಕಾರವನ್ನ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಪ್ರಾಮಾಣಿಕವಾಗಿ ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರ ಮೇಲೆ ಮೂಡ ಪ್ರಕರಣದಲ್ಲಿ ಕಾನೂನು ವಿರುದ್ಧವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದು ಆರೋಪಿಸಿದರು.

    ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಟಿ.ಎನ್.ಪ್ರಕಾಶ್, ಎಸ್ ಸಿ ಘಟಕದ ಅಧ್ಯಕ್ಷರಾದ ಬಜಗೂರು ಮಂಜುನಾಥ್, ಮಾಜಿ ಜಿ.ಪಂ. ಸದಸ್ಯ ಕೊಪ್ಪ ಶಾಂತಪ್ಪ, ಮುಖಂಡರಾದ ನ್ಯಾಕೇನಹಳ್ಳಿ ಸುರೇಶ್, ಮಹಮ್ಮದ್ ದಸ್ತಗಿರ್, ಷಫಿಉಲ್ಲಾ ಶರೀಫ್, ಕುರುಬರ ಸಂಘದ ಅಧ್ಯಕ್ಷ ಚಂದ್ರೇಗೌಡ, ವಿರುಪಾಕ್ಷಯ್ಯ ಹೊನ್ನೆನಹಳ್ಳಿ ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ

    August 1, 2026

    ಸರಗೂರು:  ಪಟ್ಟಣದಲ್ಲಿ ಮೂರನೇ ಆಷಾಢ ಶುಕ್ರವಾರದ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮದ ಅಂಗವಾಗಿ ವಾಹನ ಚಾಲಕರ ಸಂಘದ ವತಿಯಿಂದ ತಾಯಿ…

    ಔರಾದ್: ಜೈ ಕಿಸಾನ್ ಶಾಲೆ ಶಿಕ್ಷಕ, ಬಿಎಲ್ ಒ ಮಲ್ಲಿಕಾರ್ಜುನ ಪಿಟ್ರೆ ನಿಧನ

    August 1, 2026

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.