ತುಮಕೂರು ಜಿಲ್ಲೆಯ, ಪಾವಗಡ ತಾಲೂಕು, ನಿಡಗಲ್ಲು ಹೋಬಳಿ, ಕ್ಯಾತಗಾನಹಳ್ಳಿ ಗ್ರಾಮದಿಂದ ಚಿಕ್ಕತಿಮ್ಮನಹಟ್ಟಿ ಗ್ರಾಮಕ್ಕೆ ಹೋಗುವ ರಸ್ತೆ 35ಕ್ಕೂ ಹೆಚ್ಚು ವರ್ಷಗಳಿಂದ ರಸ್ತೆಗೆ ಟಾರು ಹಾಕದೆ ಜನಸಾಮಾನ್ಯರು ಓಡಾಡಲು ಬಹಳಷ್ಟು ತೊಂದರೆ ಆಗುತ್ತಿದೆ ಎಂದು ಭಾರತೀಯ ಪರಿವರ್ತನ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್. ಕೆಂಚರಾಯ ಹೇಳಿದ್ದಾರೆ.
ಈ ರಸ್ತೆಯಲ್ಲಿ ನಿಡಗಲ್ಲು, ದೇವರಾಯನರೊಪ್ಪ, ಚಿಕ್ಕತಿಮ್ಮನಹಟ್ಟಿ, ನ್ಯಾಯದಗುಂಟೆ, ಇತರೆ ಗ್ರಾಮದವರು ಈ ರಸ್ತೆಯಲ್ಲಿ ದಿನನಿತ್ಯವೂ ಸಂಚಾರ ಮಾಡುತ್ತಾರೆ, ಇಲ್ಲಿನ ರಾಜಕಾರಣಿಗಳು ಇದನ್ನು ನಿರ್ಲಕ್ಷ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಪರಿವರ್ತನ ಸಂಘದ ತುಮಕೂರು ಜಿಲ್ಲಾಧ್ಯಕ್ಷರಾದ, ರವರು ಪಾವಗಡ ಹಾಲಿ ಶಾಸಕರಾದ ಎಚ್.ವಿ.ವೆಂಕಟೇಶ್ ಅವರು. ಈ ರಸ್ತೆಗೆ ಹೊಸದಾಗಿ ಟಾರು ಹಾಕಿಸಿ ರಸ್ತೆ ನಿರ್ಮಾಣ ಮಾಡಿಕೊಡಬೇಕೆಂದು BPS ವತಿಯಿಂದ ಇದೇ ವೇಳೆ ಅವರು ಒತ್ತಾಯ ಮಾಡಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q