ತಿಪಟೂರು: ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ವೃದ್ಧ ದಂಪತಿಗೆ ಸೇರಿದ ಮನೆಯೊಂದು ಕುಸಿದು ಬಿದ್ದ ಘಟನೆ ತಾಲೂಕಿನ ಹೊನ್ನವಳ್ಳಿ ಹೋಬಳಿಯ ಮಾಯಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚನ್ನಬಸಮ್ಮw/o ರಾಜಣ್ಣ (68) ಇವರ ಮನೆ ಕುಸಿತಗೊಂಡಿದ್ದು, ಅದೃಷ್ಟವಶಾತ್ ವಯೋ ವೃದ್ಧ ದಂಪತಿಗಳು ಪ್ರಾಣಾಪಾಯದಿಂದ ಪರಾರಾಗಿದ್ದಾರೆ.
ಈ ದಂಪತಿಗೆ ಈ ಮನೆ ಬಿಟ್ಟರೆ ಬೇರೆ ಯಾವುದೇ ಮನೆ ಇಲ್ಲ. ಘಟನೆಯಿಂದಾಗಿ ಸುಮಾರು ಲಕ್ಷ ರೂಪಾಯಿಯ ಗೃಹೋಪಯೋಗಿ ವಸ್ತುಗಳು ನಾಶವಾಗಿದೆ.
ಈ ದಂಪತಿಯನ್ನು ಯಾರು ಪೋಷಣೆ ಮಾಡುವವರು ಇಲ್ಲ. ಕೂಲಿಯಿಂದ ಜೀವನ ಸಾಗಿಸುತ್ತಿದ್ದು, ಈ ಇಬ್ಬರೇ ಈ ಮನೆಯಲ್ಲಿ ವಾಸವಾಗಿದ್ದಾರೆ. ಈಗ ಮನೆಯ ಆಚೆ ವಾಸವಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ತಾಲೂಕು ಆಡಳಿತ ಇಲ್ಲಿಗೆ ಭೇಟಿ ಕೊಟ್ಟು, ಸ್ಥಳ ಪರಿಶೀಲನೆ ಮಾಡಿ ವೃದ್ಧ ದಂಪತಿಗಳಿಗೆ ಆಸರೆ ಆಗಬೇಕಾಗಿದೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q