ತುಮಕೂರು: ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರವನ್ನು ನಾಟಕ ಪ್ರದರ್ಶನಕ್ಕೆ ಕಾಯ್ದಿರಿಸುವ ವಿಚಾರದಲ್ಲಿ ದುರುಪಯೋಗವಾಗುತ್ತಿದ್ದು, ಕೂಡಲೇ ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಮಹಾ ಒಕ್ಕೂಟ ಅಪರ ಜಿಲ್ಲಾಧಿಕಾರಿ ಡಾ. ತಿಪ್ಪೇಸ್ವಾಮಿ ರವರಿಗೆ ಮನವಿ ಸಲ್ಲಿಸಿದೆ.
ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಲಾವಿದರ ಒಕ್ಕೂಟದ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ ಹಾಗೂ ಒಕ್ಕೂಟದ ಜಿಲ್ಲಾಧ್ಯಕ್ಷ ಗೂಳಹರಿವೆ ಪೆರುಮಯ್ಯ ಅವರು ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿ, ನಾನು ನಮ್ಮ ನುರಿತ ಕಲಾವಿದರಿಂದ ಸಂಪೂರ್ಣ ರಾಮಾಯಣ ಪೌರಾಣಿಕ ನಾಟಕವನ್ನು ಪ್ರದರ್ಶಿಸಲು ಸ್ಥಳಾವಕಾಶ ನೀಡುವಂತೆ ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಆದರೂ ಅವಕಾಶ ಸಿಕ್ಕಿಲ್ಲ ಎಂದು ದೂರಿದರು.
ಕೆಲವು ವ್ಯಕ್ತಿಗಳು ತಮಗೆ ಅವಶ್ಯಕತೆ ಇಲ್ಲದಿದ್ದರೂ ಮುಂಚಿತವಾಗಿ ಪದೇ ಪದೇ ಗುಬ್ಬಿ ವೀರಣ್ಣ ಕಲಾಕ್ಷೇತ್ರವನ್ನು ಆನ್ ಲೈನ್ ನಲ್ಲಿ ಕಾಯ್ದಿರಿಸಿ ಹಣ ಪಡೆದು ಅನ್ಯರಿಗೆ ಬಿಟ್ಟು ಕೊಡುತ್ತಿದ್ದಾರೆ. ಈ ಬಗ್ಗೆ ಗಮನ ಹರಿಸಿ ಕಲಾವಿದರಿಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q