ಪಾವಗಡ: ಭಾರತೀಯ ಪರಿವರ್ತನ ಸಂಘ–BPS ಹಾಗೂ ನಿಸರ್ಗ ದೃಷ್ಟಿಧಾಮ ಚಂದಾಪುರ, ಸಹಯೋಗದೊಂದಿಗೆ ಹೈಕೋರ್ಟ್ ವಕೀಲರು ಹಾಗೂ ಬಿಪಿಎಸ್ ರಾಜ್ಯಾಧ್ಯಕ್ಷರು ಆದಂತಹ ಪ್ರೊ.ಹರಿರಾಮ್ ಅವರ ನೇತೃತ್ವದಲ್ಲಿ19 ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಎಲ್ಲರನ್ನೂ ಚಿಕಿತ್ಸೆಯ ಬಳಿಕ ಬೆಂಗಳೂರಿಂದ ಪಾವಗಡಕ್ಕೆ ಕಳುಹಿಸಿಕೊಡಲಾಯಿತು.
ಇದೇ ವೇಳೆ ಮಾತನಾಡಿದ ಹರಿರಾಮ್ ಎ., ಪಾವಗಡ ತಾಲ್ಲೂಕು, ವೈ.ಎನ್.ಹೊಸಕೋಟೆ ಹೋಬಳಿ, ಬಲ್ಲೇನಹಳ್ಳಿ ಗ್ರಾಮದಲ್ಲಿ ದಿನಾಂಕ 06.08.2024 ರಂದು ಉಚಿತ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಶಿಬಿರವನ್ನು ಪರಿವರ್ತನ ಸಂಘ ಪಾವಗಡ ಮತ್ತು ನಿಸರ್ಗ ದೃಷ್ಟಿಧಾಮ ಸಹಯೋಗದೊಂದಿಗೆ ಆ ಯೋಜನೆ ಮಾಡಿದ್ದೆವು, ಈ ಆರೋಗ್ಯ ಶಿಬಿರದಲ್ಲಿ ವೈದ್ಯರ ತಪಾಸಣೆಯಲ್ಲಿ ಆಯ್ಕೆಯಾದ ಜನರಿಗೆ ದಿನಾಂಕ 11.08.2024 ರಂದು ಅದೇ ಗ್ರಾಮದಲ್ಲಿ 110 ಜನರಿಗೆ ಉಚಿತ ಕನ್ನಡಕಗಳನ್ನು ವಿತರಿಸಿದ್ದೆವು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 19 ಜನರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಎಲ್ಲರಿಗೂ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಆಗಿದ್ದು ಇಂದು ಪಾವಗಡಕ್ಕೆ ಕರೆದುಕೊಂಡು ಹೋಗುತ್ತಿದ್ದೇವೆ, ಇವರೆಲ್ಲರನ್ನು ಆಸ್ಪತ್ರೆಯಲ್ಲಿ ಚೆನ್ನಾಗಿ ನೋಡಿಕೊಂಡಂತಹ ಕೆಂಚರಾಯ, ಈರಣ್ಣ, ಹನುಮಂತರಾಯಪ್ಪ, ಅವರ ಸ್ನೇಹಿತರಿಗೆ ಧನ್ಯವಾದ ತಿಳಿಸಿದರು,
ಬಿಪಿಎಸ್ ತುಮಕೂರು ಜಿಲ್ಲಾಧ್ಯಕ್ಷ ಚಿಕ್ಕತಿಮ್ಮನಹಟ್ಟಿ ಗ್ರಾಮದ ಹೆಚ್.ಕೆಂಚರಾಯ, ಪಾವಗಡ ತಾಲೂಕು ಸಂಯೋಜಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣ, ಮುಖಂಡರಾದ ಹನುಮಂತರಾಯಪ್ಪ, ತಿಪ್ಪಯ್ಯನದುರ್ಗ ಗ್ರಾಮದ ಪ್ರಜ್ವಲ್ ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q