nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾನವತೆಗೆ ಪೂರಕ ವೈಜ್ಞಾನಿಕ ಪ್ರಗತಿ ಇಂದಿನ ಅಗತ್ಯ: ರಾಜೇಶ್ ಪದ್ಮಾರ್
    ತಿಪಟೂರು August 22, 2024

    ಮಾನವತೆಗೆ ಪೂರಕ ವೈಜ್ಞಾನಿಕ ಪ್ರಗತಿ ಇಂದಿನ ಅಗತ್ಯ: ರಾಜೇಶ್ ಪದ್ಮಾರ್

    By adminAugust 22, 2024No Comments2 Mins Read
    tipaturu

    ತಿಪಟೂರು: ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ನೂತನ ಸೈನ್ಸ್ ಕ್ಲಬ್ ಮತ್ತು ಇಕೋ ಕ್ಲಬ್ ನ ಉದ್ಘಾಟನಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಲಾಯಿತು. ನಂತರ ಕಾಲೇಜು ಆವರಣದಲ್ಲಿ 10 ಗಿಡಗಳನ್ನು ಹಸಿರುಪಡೆ ವತಿಯಿಂದ ನೆಡಲಾಯಿತು. ಸೈನ್ಸ್ ಕ್ಲಬ್ ವತಿಯಿಂದ ಸೈನ್ಸ್ ರಂಗೋಲಿ ಸ್ಪರ್ಧೆ ಹಾಗೂ ಪೋಸ್ಟರ್ ಡ್ರಾಯಿಂಗ್ ಸ್ಪರ್ಧೆ ಏರ್ಪಡಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಎಂ.ಡಿ.ಶಿವಕುಮಾರ್ ರವರು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ರಾಜೇಶ್ ಪದ್ಮಾರ್ ರವರು ಆಗಮಿಸಿದ್ದರು. ಸೈನ್ಸ್ ಕ್ಲಬ್ ಕಾರ್ಯದರ್ಶಿಯಾದ ಡಾ. ಲೋಕೇಶ್ ಕೆ ಮತ್ತು ಸಹ ಕಾರ್ಯದರ್ಶಿ ಮಂಜುನಾಥ ಪಿ. ಎನ್. ರವರು ಎಲ್ಲರಿಗೂ ಸೈನ್ಸ್ ಕ್ಲಬ್ ನ ಪ್ರತಿಜ್ಞಾ ವಿಧಿ ಬೋಧಿಸಿದರು.

    ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ರೂಢಿಸುವುದರ ಜತೆಗೆ, ಮಾನವೀಯ ಸಂವೇದನೆಗಳನ್ನು ಅರ್ಥೈಸಿಕೊಂಡು ಪರಿಸರಪೂರಕ ಮಾದರಿಯಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಉಪನ್ಯಾಸಕ ರಾಜೇಶ್ ಪದ್ಮಾರ್ ತಿಳಿಸಿದ್ದಾರೆ.


    Provided by
    Provided by

    ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ವೈಜ್ಞಾನಿಕ ಸಾಧನೆಗಳು ಹೇರಳವಾಗಿತ್ತು. ಲೋಹಶಾಸ್ತ್ರದ ಸಂಶೋಧನೆಗಳಿಂದ ಪ್ರಾರಂಭಿಸಿ ಸುಶ್ರುತನ ಶಸ್ತ್ರಚಿಕಿತ್ಸೆಯ ಪ್ರಕಾರಗಳವರೆಗೆ ವಿಸ್ತೃತವಾಗಿ ವಿಜ್ಞಾನದ ಶಾಖೆಗಳು ಬೆಳೆದಿತ್ತು. ಪರಕೀಯರ ಆಕ್ರಮಣದ ತರುವಾಯ ಕುಂಠಿತಗೊಂಡ ವೈಜ್ಞಾನಿಕ ಆವಿಷ್ಕಾರಗಳು ಇದೀಗ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಕ್ರಮೇಣ ವಿಕಸಿತಗೊಂಡಿವೆ. ಬಾಹ್ಯಕಾಶ ಕ್ಷೇತ್ರ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತೀಯರ ಸಾಧನೆ ಜಗತ್ತಿನ ಗಮನ ಸೆಳೆದಿವೆ. ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ, ಸಂಶೋಧನಾ ಪ್ರವೃತ್ತಿ, ನಿತ್ಯಬದುಕಿನ ವಿಜ್ಞಾನದ ಬೆಳವಣಿಗೆಗಳ ಕುರಿತು ಕುತೂಹಲ, ನೈತಿಕ ಹಾಗೂ ಮನುಕುಲದ ಶಾಂತಿಗೆ ಪೂರಕವಾಗಿ ವಿಜ್ಞಾನ ಕ್ಷೇತ್ರದಲ್ಲಿ ನೂತನ ಸಾಧನೆಗಳನ್ನು ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

    ಭಾರತೀಯ ದೃಷ್ಟಿಕೋನದಲ್ಲಿ ವೈಜ್ಞಾನಿಕ  ಪ್ರಗತಿಗಳೆಲ್ಲವೂ ಪ್ರಕೃತಿಗೆ ಪೂರಕವಾಗಿರಬೇಕು ಎಂಬುದು ಅನೇಕ ಸುಭಾಷಿತಗಳಲ್ಲಿ ವ್ಯಕ್ತಪಡಿಸಲಾಗಿದೆ. ಗಿಡವೊಂದನ್ನು ನೆಡುವುದು, ನೀರಿನ ಸಂರಕ್ಷಣೆ, ಪ್ಲಾಸ್ಟಿಕ್ ಕಡಿಮೆ ಬಳಕೆ ಎಲ್ಲರ ಕರ್ತವ್ಯವಾಗಬೇಕು ಎಂದು ರಾಜೇಶ್ ಪದ್ಮಾರ್ ತಿಳಿಸಿದರು.

    ಸೈನ್ಸ್ ಕ್ಲಬ್ ಅಧ್ಯಕ್ಷರಾದ ಎಂ ಡಿ ಶಿವಕುಮಾರ್ ರವರು ಪರಿಸರದ ಬಗ್ಗೆ ಕಾಳಜಿ ವಹಿಸುವಂತೆ ಹಾಗೂ ವಿಜ್ಞಾನಕ್ಕೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.

    ಪೋಸ್ಟರ್ ಸ್ಪರ್ಧೆಯಲ್ಲಿ  ಅನುಷಾ, ಮಾನಸ ಆರ್., ಉಮೆಹಾ  ಎಂಬ ವಿದ್ಯಾರ್ಥಿಗಳು ವಿಜೇತರಾದರು. ಸೈನ್ಸ್ ರಂಗೋಲಿ ಸ್ಪರ್ಧೆ ಯಲ್ಲಿ ಚಿನ್ಮಯಿ ಎಚ್.ಬಿ., ಮೇಘನಾ, ಗಗನಾ, ಭೈರವಿ ಮತ್ತು ಮಧುಶ್ರೀ ಎಂಬ ವಿದ್ಯಾರ್ಥಿಗಳು ವಿಜೇತರಾದರು. ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

    ಕಾಲೇಜಿನ ಪ್ರಾಚಾರ್ಯರಾದ ಎಂ.ಡಿ.ಶಿವಕುಮಾರ್, ಹಿರಿಯ ಉಪನ್ಯಾಸಕರಾದ ಸಚ್ಚಿದಾನಂದ ಮೂರ್ತಿ, ಸೈನ್ಸ್ ಕ್ಲಬ್ ಕಾರ್ಯದರ್ಶಿ ಡಾ.ಲೋಕೇಶ್ ಕೆ., ಸಹ ಕಾರ್ಯದರ್ಶಿ ಮಂಜುನಾಥ ಪಿ.ಎನ್.,  ಉಪನ್ಯಾಸಕರಾದ ರೇಣುಕಾ ಪ್ರಸಾದ್, ಹರ್ಷ ಕುಮಾರ್, ನೌಶಿನಾ ತರುನ್ನುಂ, ಕುಸುಮ, ಪನ್ನಗ, ಸಿಂದುಜಾ ಹಾಗೂ ಮತ್ತಿತರು ಉಪಸ್ಥಿತರಿದ್ದರು.

    ವರದಿ: ಆನಂದ್,  ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ನಡೆದ ಮೂರು ಕಾರುಗಳ ಸರಣಿ ಅಪಘಾತದಲ್ಲಿ ಇಬ್ಬರು…

    ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ

    February 9, 2026

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.