ಚಿಕ್ಕಬಳ್ಳಾಪುರ: ಮಹಿಳಾ ಟೆಕ್ಕಿಯೊಬ್ಬರು ಕೇತೇನಹಳ್ಳಿ ಜಲಪಾತಕ್ಕೆ ಆಗಮಿಸಿದ್ದ ವೇಳೆ ಕಾಲು ಜಾರಿ ಬಿದ್ದು, ಕಾಲು ಮುರಿದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಅರ್ಪಿತಾ ಕಾಲುಮುರಿದುಕೊಂಡ ಮಹಿಳೆಯಾಗಿದ್ದು, ಇವರು ಮುಂಬೈ ಮೂಲದವರಾಗಿದ್ದಾರೆ. ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅರ್ಪಿತಾ, ಸ್ನೇಹಿತರೊಂದಿಗೆ ಕೇತೇನಹಳ್ಳಿ ಜಲಪಾತ ನೋಡಲು ಹೋಗಿದ್ದರು.
ಜಲಪಾತದಲ್ಲಿ ಆಟವಾಡಿ ವಾಪಾಸ್ ಆಗುವಾಗ ಕಾಡಿನ ದಾರಿಯಲ್ಲಿ ಜಾರಿ ಬಿದ್ದಿದ್ದಾರೆ. ಪರಿಣಾಮ ಕಾಲು ಮುರಿದಿದ್ದು, ಸ್ನೇಹಿತರು ಹಾಗೂ ಸ್ಥಳೀಯರು 2 ಕಿ.ಮೀವರೆಗೆ ಮಹಿಳೆಯನ್ನು ಸ್ಟ್ರೆಚರ್ ಮೂಲಕ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ಅರ್ಪಿತಾ ದಾಖಲಾಗಿದ್ದಾರೆ. ಘಟನೆ ಬಳಿಕ ಕೇತೇನಹಳ್ಳಿ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಅರಣ್ಯದೋಳಗೆ ಪ್ರವೇಶ ಮಡದಂತೆ ಅರಣ್ಯಾಧಿಕಾರು ಸೂಚಿಸಿದ್ದು, ಸ್ಥಳದಲ್ಲಿ ಅರಣ್ಯ ಇಲಖೆ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


