ಕೊರಟಗೆರೆ: ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಮರೇನಾಯಕನಹಳ್ಳಿ ಗ್ರಾಮಸ್ಥರಿಂದ ಶ್ರೀ ಆಂಜನೇಯ ಸ್ವಾಮಿ ಮತ್ತು ಶ್ರೀ ಶನೇಶ್ವರ ಸ್ವಾಮಿಗೆ ಆರತಿಯೊಂದಿಗೆ ವಿಶೇಷ ಪೂಜೆ ನಡೆಯಿತು.
ಸಂತೃಪ್ತಿ ಮಳೆ–ಬೆಳೆಗಾಗಿ, ಜಾನುವಾರು ಸಮೃದ್ಧಿಗಾಗಿ ಗ್ರಾಮ ದೇವರಿಗೆ ಮೊರೆಯಿಟ್ಟಿತು. ಮರೇನಾಯಕನಹಳ್ಳಿ ಗ್ರಾಮದ ಬೆಟ್ಟದಲ್ಲಿ ಹುರುಳಿ ಬೀಳಿನಲ್ಲಿ ನೆಲೆಸಿರುವ ಶ್ರೀ ಶನೇಶ್ವರ ಸ್ವಾಮಿಗೆ ಊರಿನ ಗ್ರಾಮಸ್ಥರು ಆರತಿ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ನಂತರ ಗ್ರಾಮದ ಶ್ರೀ ಆಂಜನೇಯ ಸ್ವಾಮಿಗೆ ಶನಿವಾರ ರಾತ್ರಿ ಆರತಿಯೊಂದಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ದೇವರನ್ನು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಊರಿನ ಗೌಡರು, ಪಣಗಾರ್, ಪಟೇಲರು, ಒಂಬತ್ತು ಕೈವಾಡಸ್ಥರು, ರೈತರು ಊರಿನ ಹಿರಿಯರು, ಯುವಕರು, ಮಹಿಳೆಯರು ಸಾರ್ವಜನಿಕರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q