ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು , ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.
ಇನ್ನು ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು.ಪಡಿತರ ಚೀಟಿಯ ಈಕೆ ವೈಸಿ ಕಡ್ಡಾಯ ಮಾಡಬೇಕು.ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಬೇಕು.ಪಡಿತರ ಚೀಟಿ ಅಪ್ಡೇಟ್ ಅಪ್ ಡೇಟ್ ಮಾಡಬೇಕು.
ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಖಾತೆಗೆ ಜಮಾ ಆಗಲಿದೆ.
ಕರ್ನಾಟಕ ಸರ್ಕಾರದ ವೆಬ್ಸೈಟ್ https://www.karnataka.gov.in/ ಗೆ ಭೇಟಿ ನೀಡಿ ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್ ನಲ್ಲಿ ತೋರಿಸಲಾಗುತ್ತದೆ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಸಂಪರ್ಕಿಸಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


