ನವದೆಹಲಿ: ಯುದ್ಧ, ಕೋಮುಗಲಭೆಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಭಾರತೀಯರು ರಸ್ತೆ ಅಪಘಾತಗಳಲ್ಲೇ ಸಾವಿಗೀಡಾಗಿದ್ದಾರೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.
ಅವರು, FICCI ರೋಡ್ ಸೇಫ್ಟಿ ಅವಾರ್ಡ್ಸ್ ಮತ್ತು ಕಾನ್ಕ್ಲೇವ್ 2024 ರ ಆರನೇ ಆವೃತ್ತಿಯಲ್ಲಿ ಮಾತನಾಡಿ, ಪ್ರತಿ ವರ್ಷ ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸುಮಾರು 1.5 ಲಕ್ಷ ಸಾವುಗಳು ವರದಿಯಾಗಿದೆ ಎಂದರು.
ಬಲಿಪಶುಗಳಲ್ಲಿ ಸುಮಾರು 65% ಯುವಕರು ಮತ್ತು ಯುವತಿಯರು ಇದ್ದಾರೆ. ಇದರಿಂದ ಜಿಡಿಪಿಯ ಶೇ.3ರಷ್ಟು ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ನೀವು ಲೆಕ್ಕ ಹಾಕಿದರೆ, ಚೀನಾ ಅಥವಾ ಪಾಕಿಸ್ತಾನ ಯುದ್ಧಗಳು, ನಕ್ಸಲರ ದಾಳಿ, ಕೋಮು ಗಲಭೆಗಳು, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ದುರ್ಘಟನೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನೇ ಹರಕೆಯ ಕುರಿ ಮಾಡುತ್ತಿದ್ದೇವೆ. ಆದರೆ ರಸ್ತೆ ಎಂಜಿನಿಯರುಗಳ ತಪ್ಪು ಇಲ್ಲಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q