nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025
    Facebook Twitter Instagram
    ಟ್ರೆಂಡಿಂಗ್
    • ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ
    • ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    • ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ
    • ಶಿಕ್ಷಕರ ದಿನಾಚರಣೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ: ವೇದಿಕೆಯಲ್ಲೇ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು
    • ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್
    • ಠಾಣಾ ಕುಶನೂರು ನೂತನ  ಪಿಎಸ್ ಐ ಪಟೇಲ್ ಅವರಿಗೆ ಸನ್ಮಾನ
    • ಬೀದರ್:  ಮಾಂಜ್ರಾ ನದಿಗೆ ಬಿದ್ದಿದ್ದ ವ್ಯಕ್ತಿಯ ಶವ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ: ಜಿ.ಪ್ರಭು
    ತುಮಕೂರು September 1, 2024

    ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ: ಜಿ.ಪ್ರಭು

    By adminSeptember 1, 2024No Comments3 Mins Read
    g parabhu

    ತುಮಕೂರು: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಿಳಿಸುವ ಉದ್ದೇಶದಿಂದ ಶಾಲಾ–ಕಾಲೇಜುಗಳಲ್ಲಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

    ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮಾ ಗಾಂಧೀಜಿ ಅವರ ಬದುಕು, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಷ್ಯತೆ ನಿವಾರಣೆ ಮತ್ತು ಸ್ವಾತಂತ್ರ‍್ಯ ಚಳುವಳಿವಳಿಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ತಿಳಿಸುವ ಸಲುವಾಗಿ ಈ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.


    Provided by
    Provided by
    Provided by

    ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಿಗೆ ಪ್ರತ್ಯೇಕ ವಿಷಯಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು ಎಂದು ತಿಳಿಸಿದ ಅವರು, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಕುರಿತು ಯಾವುದಾದರೂ ಒಂದು ವಿಷಯದಲ್ಲಿ 5 ರಿಂದ 7ನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಕ್ಕೆ ಆಯ್ಕೆ ಮಾಡಿ ಜಿಲ್ಲಾ ಪಂಚಾಯತಿ ಕಚೇರಿಗೆ ಸಲ್ಲಿಸಬೇಕು ಹಾಗೂ ತಾಲ್ಲೂಕು ಮಟ್ಟದಲ್ಲಿ ನಡೆಯುವ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ನೀಡುವಂತೆ ಸೂಚಿಸಿದರು.

    ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ; ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ ಹಾಗೂ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ‍್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು ಕುರಿತು ಯಾವುದಾದರೂ ಒಂದು ವಿಷಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಕ್ಕೆ ಆಯ್ಕೆ ಮಾಡಬೇಕೆಂದು ಸೂಚಿಸಿದರು.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಮಾತನಾಡಿ, ಪ್ರಬಂಧ ಸ್ಪರ್ಧೆ ಕುರಿತು ರೂಪು-ರೇಷೆಗಳ ಬಗ್ಗೆ ಮಾಹಿತಿ ನೀಡುತ್ತಾ, ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ 3 ಪ್ರಬಂಧ ರಚನೆಕಾರರಿಗೆ ಅಕ್ಟೋಬರ್ 2ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಗೌರವಿಸಲಾಗುವುದು. ಜಿಲ್ಲಾ ಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯ ಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ಆಯ್ಕೆಯಾದವರಿಗೆ ರಾಜ್ಯ ಮಟ್ಟದಲ್ಲಿ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

    ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ ಎಂದು ತಿಳಿಸಿದರಲ್ಲದೆ, ಪ್ರೌಢಶಾಲಾ / ಪದವಿ ಪೂರ್ವ / ಕಾಲೇಜು ಹಾಗೂ ಸ್ನಾತಕೋತ್ತರ ಮೂರು ಪ್ರತ್ಯೇಕ ವಿಭಾಗಗಳ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 3,000 ರೂ., ದ್ವಿತೀಯ ಸ್ಥಾನಕ್ಕೆ 2,000 ರೂ., ತೃತೀಯ ಸ್ಥಾನಕ್ಕೆ 1,000 ರೂ. ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 31,000 ರೂ., ದ್ವಿತೀಯ ಸ್ಥಾನಕ್ಕೆ 21,000 ರೂ. ಹಾಗೂ ತೃತೀಯ ಸ್ಥಾನಕ್ಕೆ 11,000 ರೂ. ನೀಡಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ತುಮಕೂರು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮಾಧವ ರೆಡ್ಡಿ, ಮಧುಗಿರಿ ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ನರಸಿಂಹಮೂರ್ತಿ, ತುಮಕೂರು ವಿಶ್ವ ವಿದ್ಯಾನಿಲಯದ ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ತ್ರಿವೇಣಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ನೀರು ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ಗೃಹ ಸಚಿವರ ತವರಿನಲ್ಲಿ ಭೀಕರ ಘಟನೆ

    September 11, 2025

    ಮಹಿಳಾ ದೌರ್ಜನ್ಯ ಸಹಾಯವಾಣಿ ಸಂಖ್ಯೆ 181 ಸ್ಥಾಪನೆ

    September 11, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ತುಮಕೂರು: ಜೈನ್ ಪಿಯು ಕಾಲೇಜು, ತುಮಕೂರು ವತಿಯಿಂದ ಸತ್ಯಮಂಗಲದ ಜೆಜಿಐ ಹಾಲ್‌ ನಲ್ಲಿ ವಿಶೇಷ ಶಿಕ್ಷಣ ಮೇಳ ಹಾಗೂ ವೃತ್ತಿ…

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್

    September 13, 2025

    ದಸರಾ ಚಲನಚಿತ್ರೋತ್ಸವ ಉಪ ಸಮಿತಿ ಅಧ್ಯಕ್ಷ ದೇವಲಾಪುರ ಸಿದ್ದರಾಜುಗೆ ಸಚಿವ ಮಹದೇವಪ್ಪ ಸನ್ಮಾನ

    September 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.