ಪಾವಗಡ: ಯಾವುದೇ ರೀತಿಯಾದ ಅಹಿತಕರ ಘಟನೆಗಳಿಗೆ ಎಡೆ ಮಾಡಿಕೊಡದೆ ಗಣೇಶ ಚತುರ್ಥಿ ಶಾಂತಿಯುತವಾಗಿ ಆಚರಿಸಬೇಕೆಂದು ಗ್ರಾಮಾಂತರ ಸಿಪಿಐ ಗಿರೀಶ್ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ
ಈ ಬಗ್ಗೆ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಶಾಂತಿ ಸೌಹಾರ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಅನೇಕ ನಿಯಮಗಳನ್ನ ಬಿಡುಗಡೆ ಮಾಡಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಜೊತೆಗೆ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯಾದಂತ ಡಿಜೆ ಅವಕಾಶ ನೀಡುವುದಿಲ್ಲ, ಗಣೇಶನನ್ನು ಪ್ರತಿಷ್ಠಾಪಿಸುವಂತಹವರು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಿಂದ ಸ್ಥಳ ದೃಢೀಕರಣ ಪತ್ರ, ಅಗ್ನಿಶಾಮಕ ಮತ್ತು ಬೆಸ್ಕಾಂ ಇಲಾಖೆಯಿಂದ ಅನುಮತಿ ಪತ್ರಗಳನ್ನು ಪಡೆದು ನಂತರ ಪೊಲೀಸ್ ಠಾಣೆಯಲ್ಲಿ ಅನುಮತಿ ಪತ್ರವನ್ನು ಪಡೆಯಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೈ.ಎನ್.ಹೊಸಕೋಟೆ ಪಿಎಸ್ ಐ ಮಾಳಪ್ಪ ನಾಯ್ಕೋಡಿ ಸೇರದಂತೆ ಮತ್ತಿತರರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q