ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ವಾಸವಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲ್ಲೂಕು ಆಂಗ್ಲ ಮಾಧ್ಯಮ ಶಾಲೆ ಆಡಳಿತ ಸಂಘದ ವತಿಯಿಂದ ರಸಪ್ರಶ್ನೆ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಾಸವಿ ವಿದ್ಯಾನಿಕೇತನ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರೇಮಯೋಗಿ, ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕಾದರೆ ವಿದ್ಯಾರ್ಥಿಗಳು ಮೊದಲು ಪ್ರಶ್ನೆಯನ್ನು ಅರ್ಥ ಮಾಡಿಕೊಳ್ಳಬೇಕು. ಪ್ರಶ್ನೆ ಅರ್ಥವಾದಲ್ಲಿ ಉತ್ತರ ತಾನಾಗಿಯೇ ಮೂಡಿ ಬರುತ್ತದೆ. ಆದಾಗಿ ವಿದ್ಯಾರ್ಥಿಗಳು ಪ್ರಶ್ನೆಗಳತ್ತ ಗಮನ ಹರಿಸಬೇಕು ಎಂದರು.
ಹತ್ತನೇ ತರಗತಿಯು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ತೋರ್ಪಡಿಸಲು ದೊರೆತಿರುವ ಅವಕಾಶ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದು, ಅದನ್ನು ಹೊರಸೂಸುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಾಸವಿ ವಿದ್ಯಾನಿಕೇತನ ಕಾರ್ಯದರ್ಶಿ ಎನ್.ಜಿ.ರಾಮು ತಿಳಿಸಿದರು.
ಅಂತ್ಯೋದಯ ಶಾಲೆಯ ಮುಖಸ್ಥರಾದ ಮುನಿಸ್ವಾಮಿ ರಸಪ್ರಶ್ನೆ ಕಾರ್ಯಕ್ರಮದ ಕಾರ್ಯ ವೈಖರಿಯನ್ನು ವಿವರಿಸಿದರು.
ತಾಲ್ಲೂಕಿನ ಹನ್ನೆರಡು ಶಾಲೆಗಳ ವಿದ್ಯಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದು, ಪ್ರಥಮ ಸ್ಥಾನ ಅವನ್ನು ಕೋಟಿಗುಡ್ಡ ಸಹನಾ ಆಂಗ್ಲ ಮಾಧ್ಯಮ ಶಾಲೆ, ಶಾರದಾ ವಿದ್ಯಾಪೀಠ ಶಾಲೆಯ ದ್ವಿತೀಯ, ತೃತೀಯ ಸ್ಥಾನವನ್ನು ಜ್ಞಾನಭೋದನೆ ಶಾಲೆ ಹಾಗೂ ಶೃಂಗೇರಿ ವಿದ್ಯಾಪೀಠ ಶಾಲೆಯಲ್ಲೇ ಪಡೆದು ಪಡೆದುಕೊಂಡಿದೆ.
ಇದೇ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ಹಾಗೂ ಎಸ್.ಎಂ.ಕಾನ್ವೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಧುಸೂಧನ್, ಕೆ.ಕೆ.ಇಂಟರ್ ನ್ಯಾಷನಲ್ ವಿದ್ಯಾಸಂಸ್ಥೆಯ ಮಾನಸ, ಜ್ಞಾನಬೋಧಿನಿ ಶಾಲೆಯ ಅನಿಲ್ ಕುಮಾರ್, ಜ್ಞಾನ ವಾಹಿನಿ ಅಜಯ್ ನಾಗೇಶ್, ಗುರುಕುಲ ಕಾರ್ಯದರ್ಶಿ ನಾಗಭೂಷಣ್, ಸಹನಾ ಕಾನ್ವೆಂಟ್ ಶಾಲೆಯ ಶ್ರೀನಿವಾಸ, ವಾಸವಿ ವಿದ್ಯಾನಿಕೇತನ ಶಾಲೆಯ ಆಡಳಿತಾಧಿಕಾರಿ ಶ್ರೀನಿವಾಸ, ಪ್ರಾಂಶುಪಾಲ ಸತ್ಯನಾರಾಯಣ ರೆಡ್ಡಿ, ಮುಖ್ಯ ಶಿಕ್ಷಕ ಶ್ರೀನಿವಾಸ ಇದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q