ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಹಾಗೂ ವಿವಿಧ ರೀತಿಯ ಜ್ವರಗಳಿಂದ ಜನ ಪಟ್ಟಣದ ಸಾರ್ವಜನಿಕ ಆಸ್ಪಯತ್ರೆಯಲ್ಲಿ ಸಾಲುಗಟ್ಟಿ ಬೆಳಿಗ್ಗೆಯಿಂದ ಸಂಜೆವರೆಗೆ ಕಾದು ಚಿಕಿತ್ಸೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹದಗೆಟ್ಟ ನೈರ್ಮಲ್ಯ ವ್ಯವಸ್ಥೆಯಿಂದ ತಾಲ್ಲೂಕಿನ ರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಬೆಟ್ಟ ತಾಂಡ ಗ್ರಾಮದಲ್ಲಿ ಲಂಬಾಣಿ ಸಮುದಾಯದ 80 ಕ್ಕೂ ಹೆಚ್ಚು ಮನೆಗಳಿದ್ದರೂ ಸಹ ಸಿ.ಸಿ. ರಸ್ತೆ., ಚರಂಡಿ,ಬೀದಿ ದೀಪಗಳ ಭಾಗ್ಯವಂತೂ ಇಲ್ಲವೇ ಇಲ್ಲ ಇಲ್ಲಿಯ ಗ್ರಾಮಸ್ಥರು ಸಂಜೆಯಾದರೆ ಸಾಕು ಕತ್ತಲಲ್ಲೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅದಲ್ಲದೇ ಮಳೆಗಾಲದಲ್ಲಿ ಕಲುಷಿತ ವಾತಾವರಣ ಸೃಷ್ಟಿಯಾಗಿದ್ದು ಎಲ್ಲೆಂದರಲ್ಲಿ ಚರಂಡಿ ನೀರು, ಮಳೆ ನೀರು ನಿಂತು ಫಾರ್ತೇನಿಯಂ ಗಿಡಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಜನ ಡೆಂಘೀ ಭೀತಿಯಲ್ಲಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q