ಪಾವಗಡ: ಚಿನ್ನ ಶುದ್ಧಿಕರಿಸುತ್ತೇವೆಂದು ಹೇಳಿ, ಚಿನ್ನ ಕದ್ದು ಪರಾರಿಯಾಗುತ್ತಿದ್ದ ವೇಳೆ ಬೈಕ್ ನಿಂದ ಬಿದ್ದ ಕಳ್ಳರು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಜನರ ಬಳಿ ಬಂದು ಚಿನ್ನ ಶುದ್ಧಿಕರಿಸುತ್ತೇವೆಂದು ನಂಬಿಸಿ ಚಿನ್ನವನ್ನು ದೋಚಿ ಪರಾರಿಯಾಗಲು ಕಳ್ಳರು ಯತ್ನಿಸಿದ್ದಾರೆ. ಆದ್ರೆ ಅತೀವೇಗದಲ್ಲಿ ಆತುರಾತುರವಾಗಿ ಹೋಗುತ್ತಿದ್ದ ವೇಳೆ ಬೈಕ್ ನಿಂದ ಬಿದ್ದಿದ್ದು, ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ತಿರುಮಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅರಸೀಕೆರೆ ಪೊಲೀಸ್ ಠಾಣೆ ಪ್ರಕಟಣೆ:
ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವುದೇದರೆ, ಇರಾನಿ ಗ್ಯಾಂಗ್ ಹಳ್ಳಿಗಳಲ್ಲಿ ಬೆಡ್ ಶೀಟ್ ಮಾರಾಟ ಮಾಡುವ ಅಥವಾ ಬಂಗಾರ–ಬೆಳ್ಳಿ ಪಾಲಿಸ್ ಮಾಡುವ ಅಥವಾ ಒಂಟಿಯಾಗಿ ಇರುವ ಮಹಿಳೆಯರನ್ನು ಗುರಿಯಾಗಿ ಇಟ್ಟುಕೊಂಡು ಅಡ್ರೆಸ್ ಕೇಳುವ ನೆಪದಲ್ಲಿ ನಿಮಗೆ ಮೋಸಮಾಡುವ ಸಾಧ್ಯತೆ ಇರುವುದರಿಂದ ತಾವುಗಳು ಎಚ್ಚರಿಕೆಯಿಂದ ಇರಬೇಕು ಮತ್ತು ಅಂತಹ ಮಾಹಿತಿ ಇದ್ದರೆ ತಕ್ಷಣ ಅರಸೀಕೆರೆ ಪೊಲೀಸ್ ಠಾಣೆ ಪಿ ಎಸ್ ಐ ಮೊಬೈಲ್ ಸಂಖ್ಯೆ 9480802978ಗೆ ತಿಳಿಸುವಂತೆ ವಿನಂತಿ ಮಾಡಿಕೊಳ್ಳಲಾಗಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q