nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    • ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
    • ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
    • ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
    • ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2025ಕ್ಕೆ ಜಿಲ್ಲೆಗೆ ಹರಿಯಲಿದೆ ಎತ್ತಿನಹೊಳೆ ನೀರು: ಸಚಿವ ಪರಮೇಶ್ವರ
    ತುಮಕೂರು September 5, 2024

    2025ಕ್ಕೆ ಜಿಲ್ಲೆಗೆ ಹರಿಯಲಿದೆ ಎತ್ತಿನಹೊಳೆ ನೀರು: ಸಚಿವ ಪರಮೇಶ್ವರ

    By adminSeptember 5, 2024No Comments3 Mins Read
    g parameshwar

    ತುಮಕೂರು: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.

    ಜಿಲ್ಲಾಧಿಕಾರಿಯವರ ಕಾರ್ಯಾಲಯದಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೀರಿನ ಯಂತ್ರಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ಸ್ಪೋಟಗೊಂಡಿದ್ದವು. ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದ ಯಶಶ್ವಿಯಾಗಿವೆ. ಸೆ.6ರಂದು ಚಾಲನೆ ನೀಡಲಾಗುತ್ತಿದೆ. ಈ ನೀರನ್ನು ವಾಣಿವಿಲಾಸ ಸಾಗರ ಅಣೆಕಟ್ಟೆಗೆ 1500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಆ ಭಾಗಕ್ಕೆ ಉಪಯೋಗವಾಗಲಿದೆ. ಮುಂದಿನ ವರ್ಷ ಅರಸಿಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಳ್ಳಲಿದ್ದು ತುಮಕೂರಿಗೆ ನೀರು ಬರಲಿದೆ ಎಂದು ತಿಳಿಸಿದರು.

    ಪರಮಶಿವಯ್ಯನವರು ಹಾಸನ, ಚಿಕ್ಕಮಗಳೂರು, ತುಮಕುರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಮಾಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದಕ್ಕೆ ನೇತ್ರಾವತಿಯ ತಿರುವು ಎಂದು ಹೆಸರಿಟ್ಟಿದ್ದರು.

    ಇದಕ್ಕೆ ಮಂಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಯೋಜನೆ ಕೈ ಬಿಡುವ ಸ್ಥಿತಿ ಬಂದಿತ್ತು. ಇದಾದ ಬಳಿಕ ನೀರಾವರಿ ತಜ್ಞರು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುವ ಪ್ರದೇಶವನ್ನು ಗುರುತಿಸಿದರು. ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ, ಕೇದಿಹೊಳೆ. ಇದೆಲ್ಲವು ಕ್ರೂಡಿಕ್ರುತವಾಗಿ ಒಂದುಕಡೆ ಬಂದರೆ 24 ಟಿಎಂಸಿ ಬರುತ್ತದೆ. ಈ ಯೋಜನೆಯ ಸಾಧಕ-ಬಾಧಕಗಳನ್ನು, ನೀರು ತೆಗೆದುಕೊಳ್ಳುವ ಸಾಧ್ಯ-ಅಸಾಧ್ಯತೆಯ ಕುರಿತು ಸರ್ಕಾರಕ್ಕೆ ವರದಿ ನೀಡಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಬೇಕಾದ ಹಣಕಾಸು, ತಾಂತ್ರಿಕತೆಯನ್ನು ಅಧ್ಯಯನ ನಡೆಸಿ, ₹ 12,912.36 ಕೋಟಿ ಹಣವನ್ನು ಬಜೆಟ್‌ನಲ್ಲಿ ಒದಗಿಸಿ, 17-2-2014ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರು. ಯೋಜನೆಯ ಇವತ್ತಿನ ಮೊತ್ತ ₹ 23,251 ಕೋಟಿ ತಲುಪಿದೆ. ಈ ಯೋಜನೆಯು ಮುಂಬರುವ ಮಾರ್ಚ್ 2027ಕ್ಕೆ ಸಂಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

    ಎತ್ತಿನಹೊಳೆ ಯೋಜನೆಯ 24.01 ಟಿಎಂಸಿ ನೀರಿನಲ್ಲಿ ಜಿಲ್ಲೆಗೆ 5.470 ಟಿಎಂಸಿ ಹಂಚಿಕೆ ಮಾಡಲಾಗಿದೆ. 2.294 ಟಿಎಂಸಿ ಕುಡಿಯುವ ನೀರಿಗೆ, 3.446 ಸಣ್ಣನೀರಾವರಿ 113 ಕೆರೆಗಳ ಭರ್ತಿಗೆ ಅವಕಾಶವಿದೆ. ಒಟ್ಟು 3117 (76 ಗುಂಟೆ) ಎಕರೆ ಜಾಗದಲ್ಲಿ 2022 ಎಕರೆ ಭೂಮಿಗೆ ಹಣ ಮಂಜೂರಾಗಿ, ಭೂಸ್ವಾಧೀನವಾಗಿದೆ. 80ರಷ್ಟು ಭೂಸ್ವಾಧೀನಗೊಂಡಿದೆ. ರೂ 1200 ಕೋಟಿ ಬಿಡುಗಡೆಯಾಗಿದೆ. 2025ಕ್ಕೆ ಜಿಲ್ಲೆಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ‌. ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 0.20 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ತಿಳಿಸಿದರು.

    ರೂ. 1200 ಕೋಟಿಗಳಲ್ಲಿ ರೂ 448 ಕೋಟಿ ಹಂಚಿಯಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ 434 ಕೋಟಿ ಬಾಕಿ ಇದೆ. ರೂ 397 ಕೋಟಿ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡತೆ ಹಂತಹಂತವಾಗಿ ಹಣ ಮಂಜೂರು ಮಾಡಲಾಗುವುದು‌ ಎಂದು ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ 150 ಕಿ.ಮೀ.ಕೆನಾಲ್:

    ಜಿಲ್ಲೆಯಲ್ಲಿ ಮುಖ್ಯ ಕೆನಾಲ್ 150 ಕಿ.ಮೀ ಇದೆ. ಇದರಲ್ಲಿ 102 ಕಿ.ಮೀ ಕೆನಾಲ್ ಕಾಮಗಾರಿ ಪೂರ್ಣಗೊಂಡಿದೆ. 121 ಕಿ.ಮೀ ಫೀಡರ್ ಕೆನಾಲ್‌ನಲ್ಲಿ 106 ಕಿ.ಮೀ. ಪೂರ್ಣಗೊಂಡಿದೆ. ಜುಲೈ 2025ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಸುಮಾರು 63 ಎಕರೆ ಅರಣ್ಯ ಭೂಮಿ ಈ ಯೋಜನೆಯಲ್ಲಿ ಬರುತ್ತದೆ ಎಂದರು.

    ಭದ್ರಾ ಮೇಲ್ದಂಡೆ: ಮೊದಲನೆ ಯೋಜನೆ ಮಾಡಿದಾಗ ಕೊರಟಗೆರೆ ತಾಲ್ಲೂಕಿನ ಬೈಲಗೊಂಡನಹಳ್ಳಿ 2500 ಸಾವಿರ ಎಕರೆ ಭೂಮಿಯನ್ನು, ದೊಡ್ಡಬಳ್ಳಾಪುರ ತಾಲೂಕಿಗೆ ಸೇರಿದ 2500 ಭೂಮಿ ಇದೆ.

    ದೊಡ್ಡಬಳ್ಳಾಪುರ ಜಾಗವು ಅಲ್ಲಿನ ಭೂಮಿಯ ಮೌಲ್ಯಕ್ಕೆ ತೆಗೆದುಕೊಳ್ಳುತ್ತದೆ. ತುಮಕೂರಿನಲ್ಲಿ 12 ಲಕ್ಷ ರೂ. ತೆಗೆದುಕೊಳ್ಳುತ್ತದೆ. ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ನನ್ನನ್ನು ಸಚಿವ ಸಂಪುಟ ಉಪ ಸಮಿತಿ ಸದಸ್ಯನನ್ನಾಗಿ ಮಾಡಿತು. ತದನಂತರ ಬಂದ ಸರ್ಕಾರ ಯೋಜನೆಯನ್ನು ಅಲ್ಲಿಗೆ ಕೈಬಿಟ್ಟರು. ಸಧ್ಯ ಬೈಲಗೊಂಡಲಹಳ್ಳಿಯಲ್ಲಿ ಯಾವುದೇ ರಿಸರ್ವ್ ಭೂಮಿ ಇರುವುದಿಲ್ಲ. ಈ ಹಿಂದೆ ಭೂಮಿ ಕೊಡುವುದಾದರೆ ಸರ್ಕಾರಕ್ಕೆ ಒತ್ತಾಯಿಸುವುದಾಗಿ ರೈತರೊಂದಿಗಿನ ಸಭೆಯಲ್ಲಿ ತಿಳಿಸಿದ್ದೆ. ಇದಕ್ಕೆ ರೈತರು ನಿರಾಕರಿಸಿದ್ದರು ಎಂದು ಹೇಳಿದರು.

    ಶೇ.64ರಷ್ಟು ಕೆನಾಲ್ ಕಾಮಗಾರಿ ಪೂರ್ಣ:

    ಎತ್ತಿನಹೊಳೆ ಯೋಜನೆಯ ಕೆನಾಲ್ ದಾರಿ ತಿಪಟೂರು 43 ಕಿ.ಮೀ, ಚಿಕ್ಕನಾಯಕನಹಳ್ಳಿ 12 ಕಿ.ಮೀ, ತುರುವೆಕೆರೆ 1 ಕಿ.ಮೀ, ಗುಬ್ಬಿ 41 ಕಿ.ಮೀ, ತುಮಕೂರು ಗ್ರಾ 31, ಕೊರಟಗೆರೆ 19, ಮಧುಗಿರಿ (ಫೀಡರ್ ಕೆನಾಲ್) 40 ಕಿ.ಮೀ, ಪಾವಘಡ 42 ಕಿ.ಮೀ. ಕೆನಾಲ್ ಹಾದುಹೋಗಲಿದೆ. ಜಿಲ್ಲೆಯಲ್ಲಿ ಶೇ. 64ರಷ್ಟು ಮುಖ್ಯ ಕೆನಾಲ್ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

    ಕೊರಟಗೆರೆ–ತುಮಕೂರು ಎಪಿಎಂಸಿ ಅವ್ಯವಹಾರ ಕುರಿತು: ಎಪಿಎಂಸಿ ಮಳಿಗೆಗಳನ್ನು ಹಂಚಿಕೆ‌ ಮಾಡಲು ಸರ್ಕಾರವು ನಿಯಮಗಳನ್ನು ಮಾಡಿದೆ. ನಿಯಮಗಳ ಪ್ರಕಾರವೇ ಹಂಚಿಕೆ ಮಾಡಲಾಗುವುದು‌. ನಿಯಮ ಮೀರಿ ಹಂಚಿಕೆ ಮಾಡಿರುವುದು ಕಂಡುಬಂದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು‌‌. ಹತ್ತು ವರ್ಷಗಳ ಹಿಂದೆ ಎಪಿಎಂಸಿ ಮಳಿಗೆಗಳು ಹಂಚಿಕೆಯಾಗಿವೆ‌. ಆಗ ಏನೆಲ್ಲ ನಡೆದಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

    ಹೇಮಾವತಿ: ಜಿಲ್ಲೆಗೆ 22 ಜುಲೈ 2024 ರಿಂದ 25 ಆಗಸ್ಟ್ 2024ರವರೆಗಡ 3915 ಎಂಸಿಎಫ್‌ಟಿ ನೀರು ಬಂದಿದೆ. ಪ್ರತಿ ದಿನ 1500 ಕ್ಯೂಸೆಕ್ ನೀರು ಬರುತ್ತಿದ್ದು, ಕುಣಿಗಲ್‌ವರೆಗು ಹೋಗುತ್ತಿದೆ. ಬುಗುಡನಹಳ್ಳಿ ಕೆರೆಯಲ್ಲಿ 290 ಎಂಸಿಎಫ್‌ ಟಿ ನೀರು ಸಂಗ್ರಹವಿದೆ. ಸಣ್ಣನೀರಾವರಿ 27 ಕೆರೆಗಳು ಭರ್ತಿಯಾಗಿವೆ. ಆ ಭಾಗದಲ್ಲಿ ಮಳೆಯಾಗುತ್ತಿರುವು ಹಿನ್ನೆಲೆಯಲ್ಲಿ ಇನ್ನು ನೀರು ಬರಲಿದೆ‌ ಎಂದು ಹೇಳಿದರು.

    ಸಿ.ಟಿ.ರವಿಗೆ ತಿರುಗೇಟು:

    ನಾವು ಎತ್ತಿನಹೊಳೆ ಯೋಜನೆ ಪೂರ್ಣಗೊಂಡಿದೆ ಎಂದು ಎಲ್ಲಿಯೂ ಹೇಳಿಲ್ಲ. ಯೋಜನೆಯ 1ನೇ ಹಂತ ಕಾಮಗಾರಿ ಪೂರ್ಣಗೊಂಡಿದೆ. ಸಿ.ಟಿ.ರವಿ ಡಬಲ್ ಗ್ಯಾಜ್ಯುಯೇಟ್ ಪದವೀಧರರು. ಅವರನ್ನು ತಪ್ಪಿಸಿ ಮಾಡಲಾಗುವುದಿಲ್ಲ ಸಿ.ಟಿ.ರವಿ ಅವರಿಗೆ ತಿರುಗೇಟು ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ಹಣ್ಣು ಎಂದಾಕ್ಷಣ ಇದೀಗ ವಿದೇಶಿ ಹಣ್ಣುಗಳದ್ದೇ ಹವಾ ನಮ್ಮ ಕಾಡು ಹಣ್ಣುಗಳ ಔಷಧೀಯ ಗುಣಗಳ ಮುಂದೆ ಇದೇನು ಅಲ್ಲ ಮುಂದೊಂದು…

    ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ

    August 2, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.