ಪಾವಗಡ: ಟಾಟಾ ಎಸ್ ವಾಹನ ಸಹಿತ ವ್ಯಕ್ತಿಯೊಬ್ಬರು ಸುಟ್ಟುಕರಕಲಾಗಿ ಪತ್ತೆಯಾಗಿರುವ ಘಟನೆ ಪಾವಗಡ ತಾಲೂಕಿನ ಬಳ್ಳಾರಿ ರಸ್ತೆಯ ವೀರಮ್ಮನಹಳ್ಳಿ ಗೇಟ್ ನಿಂದ ಪಲವಳಿಗೆ ಬರುವ ಮಾರ್ಗ ಮಧ್ಯದ ರೈಲ್ವೆ ಬ್ರಿಡ್ಜ್ ಸಮೀಪ ನಡೆದಿದೆ.
ಶುಕ್ರವಾರ ಬೆಳಗ್ಗಿನ ಜಾವ 5 ಗಂಟೆಯ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯದ ಮಾಹಿತಿಯ ಪ್ರಕಾರ ಸುಟ್ಟು ಕರಕಲಾಗಿರುವ ವ್ಯಕ್ತಿ ಎನ್.ಹೊಸಕೋಟೆ ನಿವಾಸಿ ರವಿ ಕುಮಾರ್ ಅಂತ ಹೇಳಲಾಗಿದೆ.
ಘಟನೆಗೆ ಸಂಬಂಧಪಟ್ಟಂತೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q