ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಷ್ಟ್ರೀಯ ವಿದ್ಯಾಪೀಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಇದೇ ವೇಳೆ ತಾಲ್ಲೂಕು ಮಟ್ಟದಲ್ಲಿ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಬಾಲಕರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ, ಎತ್ತರ ಜಿಗಿತ ಪ್ರಥಮ ಸ್ಥಾನ ಹಾಗೂಉದ್ದಜಿಗಿತ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಆರ್.ವಿ.ಪಿ. ಸಂಸ್ಥೆಯ ಅಧ್ಯಕ್ಷರಾದ ಈ.ವಿ.ಶ್ರೀಧರ್, ಕಾರ್ಯದರ್ಶಿ ಎನ್.ಆರ್.ಅಶ್ವತ್ಥ್ ಕುಮಾರ್,ನಿರ್ದೇಶಕರಾದ ಟಿ.ಆರ್.ವಿ. ಪ್ರಸಾದ್, ಉಪನ್ಯಾಸಕರಾದ ಅನಿಲ್ ಕುಮಾರ್, ರಾಜು, ಗೋಪಾಲ್, ರಮೇಶ್ ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296