ತುಮಕೂರು: ಅನೇಕ ತಿಂಗಳಿನಿಂದ ಸಾರ್ವಜನಿಕ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.
ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಚಿರತೆ ಸೆರೆಗಾಗಿ ಬೋನು ಇಡಲಾಗಿತ್ತು. ಬೋನಿಗೆ ಬಿದ್ದ ಸುಮಾರು 1.5 ವರ್ಷದ ಗಂಡು ಚಿರತೆಯಾಗಿದೆ.
ಈ ಚಿರತೆ ಕಳೆದ ಎರಡ್ಮೂರು ತಿಂಗಳಿನಿಂದ ಹೊನ್ನುಡಿಕೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿತ್ತು.
ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದ ಗ್ರಾಮಸ್ಥರ ಮನವಿ ಮೇರೆಗೆ ಡಿಎಫ್ಒ ಅನುಪಮಾ ನೇತೃತ್ವದಲ್ಲಿ, ಎಸಿಎಫ್ ಮಹೇಶ್ ಮಾಲಗತಿ ಆರ್ ಎಫ್ ಒ ನಿಮತಾ, ಡಿಆರ್ ಎಫ್ ರಬ್ಬನಿ ತಂಡದಿಂದ ಚಿರತೆ ಸೆರೆ ಕಾರ್ಯಚರಣೆ ನಡೆದಿತ್ತು.
ಚಿರತೆ ಭೀತಿಯಿಂದ ಇಲ್ಲಿನ ಸ್ಥಳೀಯರು ಆತಂಕಕ್ಕೀಡಾಗಿದ್ದರು. ಇದೀಗ ಅರಣ್ಯಾಧಿಕಾರಿಗಳು ಚಿರತೆಯನ್ನ ಯಶಸ್ವಿಯಾಗಿ ಸೆರೆ ಹಿಡಿದಿದ್ದು, ಹೀಗಾಹಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q