ಪಾವಗಡ: ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಕುರಿ ಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 15 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಚಿಕ್ಕಜಾಲೊಡು ಗ್ರಾಮದಲ್ಲಿ ಶನಿವಾರ ಸಂಜೆ ಸುಮಾರು 5 ಗಂಟೆಯ ಸಂದರ್ಭದಲ್ಲಿ ಜರುಗಿದೆ
ಗ್ರಾಮದ ಸಿದ್ದಲಿಂಗಪ್ಪ ಎನ್ನುವವರಿಗೆ ಸೇರಿದಂತಹ ಕುರಿಮರಿಗಳು ಇವಾಗಿದ್ದು ಕುರಿಗಳನ್ನು ಮೇಯಿಸಲು ಹೊಲಗಳಿಗೆ ಕರೆದುಕೊಂಡಾಗ ಅವುಗಳ ಮರಿಗಳನ್ನು ಕೊಟ್ಟಿಗೆ ಬಳಿಯೇ ಕುಡಿ ಹಾಕಲಾಗಿತ್ತು.
ಕೊಟ್ಟಿಗೆಗೆ ಏಕಾಏಕಿ ನಾಯಿಗಳು ದಾಳಿ ನಡೆಸಿದ ಹಿನ್ನೆಲೆ 15 ಕುರಿ ಮರಿಗಳು ಸಾವನಪ್ಪಿದ್ದು ಐದು ಮರಿಗಳು ನಾಯಿಗಳಿಂದ ತಪ್ಪಿಸಿಕೊಂಡಿದೆ. ಇದರಿಂದಾಗಿ ರೈತ ಸಿದ್ದಲಿಂಗಪ್ಪ 50,000 ನಷ್ಟಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಘಟನೆಯು ವೈ ಎನ್, ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q