ಪಾವಗಡ: 2024–25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿ.ಪಿ.ಎಸ್. ಆಧಾರಿತ ಮೊಬೈಲ್ ಆಪ್ಲಿಕೇಶನ್ ಬಳಸಿ ಸರ್ವೆ ನಂಬರ್/ಉಪ ಸರ್ವೆ ನಂಬರ್ ವಾರು ಬೆಳೆ ಪ್ರದೇಶದ ನಿಖರ ಮಾಹಿತಿಯನ್ನು ದಾಖಲಿಸುವ ಕಾರ್ಯ ಆಯಾ ಗ್ರಾಮಕ್ಕೆ ನಿಯೋಜಿತರಾದ ಖಾಸಗಿ ನಿವಾಸಿಗಳಿಂದ ಆಗಸ್ಟ್ 16ರಿಂದ ತಾಲ್ಲೂಕಿನಾದ್ಯಂತ ಪ್ರಾರಂಭವಾಗಿರುತ್ತದೆ.
ಮುಂದುವರೆದು, ರೈತರ ಬೆಳೆ ಸಮೀಕ್ಷೆ ಆಪ್ ನಲ್ಲಿ ರೈತರು ತಾವೇ ಸ್ವತಃ ತಮ್ಮ ಜಮೀನಿನಲ್ಲಿನ ಬೆಳೆಗಳ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿರುತ್ತದೆ. ಬೆಳೆ ಸಮೀಕ್ಷೆ ಕಾರ್ಯದಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಪ್ರಕೃತಿ ವೀಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಸಂಬವಿಸಿದಾಗ ಎನ್.ಡಿ.ಆರ್.ಎಫ್/ಎಸ್.ಡಿಆರ್.ಎಫ್ ಅಡಿಯಲ್ಲಿ ಸಹಾಯಧನ ನೀಡುವ ಸಂಬಂಧ ಅರ್ಹ ಫಲಾನುಭವಗಳ ಪಟ್ಟಿಯನ್ನು ತಯಾರಿಸಲು, ಬೆಳೆ ವಿಮಾ ಯೋಜನೆಯಡಿ ತಾಕು ಹಂತದ ಬೆಳೆ ಪರಿಶೀಲನೆಗೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ, ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬಳಸಲಾಗುತ್ತದೆ. ದಿನಾಂಕ:08.09.2024ರ ದಿನದ ಅಂತ್ಯಕ್ಕೆ ಶೇ.55ರಷ್ಟು ತಾಕುಗಳ ಬೆಳೆ ಸಮೀಕ್ಷೆ ಕಾರ್ಯವು ಪೂರ್ಣಗೊಂಡಿರುತ್ತದೆ.
ಆದ ಕಾರಣ ತಾಲ್ಲೂಕಿನ ಎಲ್ಲಾ ರೈತರು ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳ ಬೆಳೆ ಸಮೀಕ್ಷೆ ಕಾರ್ಯವನ್ನು ತಮ್ಮ ಗ್ರಾಮಕ್ಕೆ ನಿಯೋಜಿತರಾದ ಖಾಸಗಿ ನಿವಾಸಿಗಳ ಮೂಖಾಂತರ ಅಥವಾ ತಾವೇ ರೈತರ ಬೆಳೆ ಸಮೀಕ್ಷೆ ಆಪ್ ಮುಖಾಂತರ ದಿನಾಂಕ:15.09.2024 ರೊಳಗಾಗಿ ಕೈಗೊಳ್ಳಬೇಕೆಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ಆರ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q