ಭಾನುವಾರ ಪಾವಗಡ ಪಟ್ಟಣದಲ್ಲಿ ಅಂತರಾಷ್ಟ್ರೀಯ ದಿನಾಚರಣೆಯ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಕಿಲೋಮೀಟರ್ ಉದ್ದದ ಮಾನವ ಸರಪಳಿಯನ್ನು ನಿರ್ಮಾಣ ಮಾಡಲಾಗಿದೆ.
ಪಾವಗಡ ಪಟ್ಟಣದ ಶನಿ ಮಹಾತ್ಮ ವೃತ್ತದಲ್ಲಿ ಮಾನವ ಸರ್ಪಡೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.
ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಒಂದು ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗುತ್ತಿದ್ದು, ಅದರಂತೆ ಪಾವಗಡ ತಾಲೂಕಿನಲ್ಲಿ ವಿದ್ಯಾರ್ಥಿಗಳನ್ನು ಒಳಗೊಂಡಂತೆ ನೂರಾರು ಸಂಖ್ಯೆಯಲ್ಲಿ ನಾಗರಿಕರು ಶಿಕ್ಷಕರು ಸರ್ಕಾರಿ ಅಧಿಕಾರಿಗಳು ಮಾನವ ಸೇರ್ಪಡೆ ನಿರ್ಮಾಣದಲ್ಲಿ ಪಾಲ್ಗೊಂಡು ಯಶಸ್ವಿಯಾಗಿ ನಡೆಸಿದ್ದು ಎಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು ಈ ಸಂದರ್ಭದಲ್ಲಿ ಹಲವಾರು ಜನ ಹಾಜರಾಗಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q