ಬೀದರ: ಬಸವಕಲ್ಯಾಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದೆ. 2025ರ ಡಿಸೆಂಬರ್ ಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅನುಭವ ಮಂಟಪಕ್ಕೆ ಈವರೆಗೆ 300 ಕೋಟಿ ರೂ. ಬಿಡುಗಡೆಯಾಗಿದ್ದು, ಅನುದಾನದ ಯಾವುದೇ ಕೊರತೆ ಇಲ್ಲ. ಅನುಷ್ಠಾನದ ಜವಾಬ್ದಾರಿ ಗುತ್ತಿಗೆದಾರರ ಮೇಲಿದೆ. ಶೇ.48ರಷ್ಟು ಕಾಮಗಾರಿ ಮುಗಿದಿದೆ ಅಂತ ತಿಳಿಸಿದ್ದಾರೆ.
ಕಾಲಮಿತಿಯಲ್ಲಿ ಇನ್ನುಳಿದ ಕೆಲಸ ಮುಗಿಸಲು ನಿರ್ದೇಶನ ನೀಡಿದ್ದೇನೆ. ಮಂಟಪಕ್ಕೆ ಗುಣಮಟ್ಟದ ಕಲ್ಲುಗಳು ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಹುಡುಕಾಟ ನಡೆದಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q