ಚಿಕ್ಕಮಗಳೂರು: ವೈಎಸ್ ಆರ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂಬ ಚಂದ್ರಬಾಬು ನಾಯ್ಡು ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಜನರ ಧಾರ್ಮಿಕ ಭಾವನೆಗಳ ಜೊತೆ ಯಾರೂ ಆಟವಾಡಬಾರದು. ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನು ನಾನೂ ಗಮನಿಸಿದ್ದೇನೆ. ಇದು ಚಿಕ್ಕ ವಿಚಾರವಲ್ಲ, ಗಂಭೀರವಾದ ವಿಚಾರ. ಚಂದ್ರಬಾಬು ನಾಯ್ಡು ಅವರ ಆರೋಪವನ್ನು ಗಂಭೀರವಾಗಿ ಪರಿಗಣಿಸೋಣ ಎಂದಿದ್ದಾರೆ.
ತಿರುಪತಿ ಲಡ್ಡು ಪ್ರಸಾದದ ಜೊತೆ ಜನರ ಭಾವನಾತ್ಮಕ ಸಂಬಂಧವಿದೆ. ನಾವೆಲ್ಲರೂ ಲಡ್ಡುವನ್ನು ಪ್ರಸಾದದ ರೂಪದಲ್ಲಿ ಸ್ವೀಕರಿಸಿದ್ದೇವೆ. ಭಾವನಾತ್ಮಕ ವಿಚಾರದಲ್ಲಿ ಯಾರೂ ಆಟವಾಡಬಾರದು ಎಂದರು.
ಚಂದ್ರಬಾಬು ನಾಯ್ಡು ಅವರ ಹೇಳಿಕೆ ಸತ್ಯವಾಗಿದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಿಂದ ಭಕ್ತರಲ್ಲಿಯೂ ಸಾಕಷ್ಟು ಗೊಂದಲಗಳುಂಟಾಗುತ್ತವೆ. ಹಾಗಾಗಿ ಭಕ್ತರ ಸಂಶಯ ದೂರವಾಗಿಸಲು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q