ಬೆಂಗಳೂರು: ರಾಜ್ಯದಲ್ಲಿ ಇದೀಗ ಬೆಲೆ ಏರಿಕೆ ಪರ್ವ ಮತ್ತೆ ಆರಂಭಗೊಂಡಿದೆ. ಹಾಲಿನ ದರ ಏರಿಕೆ ಬಗ್ಗೆ ಇನ್ನೂ ಚರ್ಚೆ ಬಿಸಿಯಾಗಿರುವಾಗಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ವರದಿಗಳ ಪ್ರಕಾರ ರೂ.14 ರಿಂದ 16ರವರೆಗೆ ಅಡುಗೆ ಎಣ್ಣೆದರ ಹೆಚ್ಚಳವಾಗುವ ಸಾಧ್ಯತೆ ಇದೆಯಂತೆ, ಈ ಮೂಲಕ ಬಡ ಜನರ ಜೀವನ ದುಬಾರಿಯಾಗುತ್ತಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ.
ನಂದಿನಿ ಹಾಲಿನ ದರ ಮುಂದೆ 5 ರೂಪಾಯಿಗಳಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಮಾತನಾಡುತ್ತಾ, ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತಿದ್ದೇವೆ, ಲಾಭಾಂಶ ರೈತರಿಗೆ ಕೊಡ್ತೇವೆ ಎಂದಿದ್ದರು.
ಒಂದರ ಹಿಂದೊಂದರಂತೆ ಬೆಲೆ ಏರಿಕೆಯಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗ್ತಿದೆ. ಜನರ ಆದಾಯ ಹೆಚ್ಚಾಗುತ್ತಿಲ್ಲ. ಆದರೆ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಲೇ ಇದೆ. ಹೀಗಾದ್ರೆ ಬದುಕೋದು ಹೇಗೆ ಅನ್ನೋದು ಮಧ್ಯಮ ವರ್ಗದ ಜನರ ಆತಂಕವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q