nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ:  ಇಲ್ಲಿದೆ ಸಂಪೂರ್ಣ ವರದಿ
    ರಾಜ್ಯ ಸುದ್ದಿ September 21, 2024

    ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ:  ಇಲ್ಲಿದೆ ಸಂಪೂರ್ಣ ವರದಿ

    By adminSeptember 21, 2024No Comments2 Mins Read
    tumakuru

    ತುಮಕೂರು: ನಗರದಲ್ಲಿ ನಡೆಯುತ್ತಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವವನ್ನು ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಇಂದು ಉದ್ಘಾಟಿಸಿದರು.

    ನಗರದ ಟೌನ್ ಹಾಲ್ ವೃತ್ತದಲ್ಲಿ ಆರಂಭವಾದ ಅಂತಹ ಮಹೋತ್ಸವವನ್ನು ಸಚಿವ ವಿ.ಸೋಮಣ್ಣ ಡಮರುಗ ಬಾರಿಸುವ ಮೂಲಕ ಉದ್ಘಾಟಿಸಿದರು.


    Provided by
    Provided by
    Provided by

    ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು  ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಟಾಪಿಸಲ್ಪಟ್ಟಿರುವ ಗಣಪತಿಯಾಗಿದೆ.

    ತುಮಕೂರಿನ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆ ಮಾಡಿರುವ ಹಿಂದೂ ಮಹಾಗಣಪತಿಯಾಗಿದೆ. ಬಾಂಬೆ ಡೋಲ್, ಡಿಜೆ ಸೇರಿದಂತೆ ವಿವಿಧ ಕಲಾತಂಡಗಳಿಂದ ಮೆರವಣಿಗೆಗೆ ಮೆರಗು ನೀಡಿವೆ.

    ಮೆರವಣಿಗೆಯಲ್ಲಿ ಶ್ರೀರಾಮ, ಆಂಜನೇಯ, ಭಾರತ ಮಾತೆ, ನಂದಿ ಸೇರಿದಂತೆ ಹಲವು ಕಟೌಟ್ ಗಳನ್ನು ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

    ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ರಾತ್ರಿ ‌10 ಗಂಟೆವರೆಗೂ ನಡೆಯಲಿರುವ ಮೆರವಣಿಗೆಯುದ್ಧಕ್ಕೂ ತುಮಕೂರು ಎಸ್.ಪಿ.ಅಶೋಕ್ ವೆಂಕಟ್ ನೇತೃತ್ವದಲ್ಲಿ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ.

    ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಕಟ್ಟೆಚ್ಚರ ವಹಿಸಿದ್ದು ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಹಾಕಲಾಗಿದೆ. ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದ್ದು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

    ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು:  

    ದರ್ಗಾ ಎದುರಿನಿಂದ ಸಾಗುತ್ತಿದ್ದ ಗಣೇಶ ಮೆರವಣಿಗೆ ವೇಳೆ ಗಣೇಶನಿಗೆ ಹಾರ ಹಾಕಿ, ವಿಶೇಷ ಪೂಜೆಯನ್ನು ಮುಸ್ಲಿಂ ಬಾಂಧವರು ಸಲ್ಲಿಸಿದರು. ನಗರದ ಜೋಡಿ ಮಜಾರ್ ಎದುರು ಘಟನೆ ಹಜರತ್ ಹುಸೇನ್ ಭಾಷಾ ಖಾದ್ರಿ ದರ್ಗಾ ಎದುರು ವಿಶೇಷ ಪೂಜೆ ಮಾಡಲಾಯಿತು.

    ತುಮಕೂರು ವಿವಿ ವಿದ್ಯಾರ್ಥಿಗಳಿಗೆ ನಿರ್ಬಂಧ:

    ಇಂದು ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಆಯೋಜಿಸಲಾಗಿದೆ.  ಈ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆಯಿಂದ ಗಲಾಟೆ ನಡೆಯುವ ಸಾಧ್ಯತೆಯಿದೆ.  ಹೀಗಾಗಿ  ಶಾಲಾ ಕಾಲೇಜಿನ ಮಕ್ಕಳು ಯಾರ ಒತ್ತಡಕ್ಕೆ ಒಳಗಾಗಿ ಮೆರಣಿಗೆಯಲ್ಲಿ ಪಾಲ್ಗೊಳ್ಳುವಂತಿಲ್ಲ.‌  ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿವಿಯ ಎಚ್ ಒಡಿಗಳಿಗೆ ಆದೇಶ ಮಾಡಲಾಗಿದೆ.

    ಮುನ್ನೆಚ್ಚರಿಕೆ ಕ್ರಮವಾಗಿ ಆದೇಶ ಹೊರಡಿಸಿದ ತುಮಕೂರು ವಿವಿ ಕುಲಸಚಿವರು.‌ ತುಮಕೂರು ವಿವಿಗೆ ಪತ್ರ ಬರೆದಿರುವ ಪೊಲೀಸರು.ತುಮಕೂರು ನಗರ ಠಾಣೆ ಪೊಲೀಸರಿಂದ ಕುಲ ಸಚಿವರಿಗೆ ಪತ್ರ ಬರೆಯಲಾಗಿದೆ.

    ಇಂದು ನಡೆಯುವ ಗಣೇಶೋತ್ಸವ ಮೆರವಣಿಗೆಯಲ್ಲಿ ಗಲಾಟೆ ನಡೆಯುವ  ಮಾಹಿತಿಯಿದೆ. ಕೋಮು ಪ್ರಚೋದನಕಾರಿ ಘಟನೆಗಳು ನಡೆಯುವ ಸಂಭವಿದೆ.  ಮೆರವಣಿಗೆಯಲ್ಲಿ ನಾಗರೀಕರು ಶಾಲಾ ಕಾಲೇಜು ಮಕ್ಕಳು ಭಾಗವಹಿಸುವ ಸಾಧ್ಯತೆಯಿದೆ. ಕೋಮು ಭಾವನೆ ಕೆರಳಿಸುವ ಕಿಡಿಗೇಡಿಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ಶಾಲಾ ಕಾಲೇಜು ಮಕ್ಕಳನ್ನು ಒತ್ತಾಯ ಪೂರ್ವಕವಾಗಿ ಮೆರವಣಿಗೆಗೆ ಕರೆತರುವ ಸಾಧ್ಯತೆಯಿದೆ. ಇದಕ್ಕೆ ಆಸ್ಪದ ಕೊಡದಂತೆ ಎಚ್ಚರಿಕೆವಹಿಸುವಂತೆ ವಿವಿ ಕುಲಸಚಿವರಿಗೆ ಪತ್ರ ಬರೆಯಲಾಗಿದೆ .  ಪೊಲೀಸರ ಪತ್ರದ ಆಧಾರದ ಮೇಲೆ ಕುಲಸಚಿವರು ಆದೇಶ ಹೊರಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.