ಪಾವಗಡ: ತಾಲೂಕಿನ ಮರಿದಾಸನಹಳ್ಳಿಯ ಸಿಆರ್ ಪಿ ನರೇಂದ್ರ ನಾಯ್ಕ ಅವರು, ಧಾರವಾಡದಲ್ಲಿ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಶಿಕ್ಷಕ ಸೇವಾ ಪ್ರಶಸ್ತಿಯನ್ನು ಪಡೆದು ಪಾವಗಡ ತಾಲೂಕಿಗೆ ಕೀರ್ತಿಯನ್ನ ತಂದಿದ್ದಾರೆ.
ಈ ಪ್ರಶಸ್ತಿಗೆ ಭಾಜನರಾಗಿರುವ ನರೇಂದ್ರ ನಾಯ್ಕ ಎನ್.ರವರನ್ನು ಹೆಲ್ಫ್ ಸೊಸೈಟಿ ಮತ್ತು ಸೇವಾ ಟ್ರಸ್ಟ್ ಪಾವಗಡ ತಾಲೂಕು ಘಟಕ ಅವರ ನಿವಾಸಕ್ಕೆ ಭೇಟಿ ನೀಡಿ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದೆ.
ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ಪದಾಧಿಕಾರಿಗಳಾದ ಅರವಿಂದ್, ನರೇಶ್ ಹಾಗೂ ಶಿಕ್ಷಕರ ಕುಟುಂಬಸ್ಥರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296