nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ರಾಮಕೃಷ್ಣ ಸೇವಾಶ್ರಮ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರವಾಹ ಪರಿಹಾರ ಯೋಜನೆ ಆರಂಭ
    ಪಾವಗಡ September 24, 2024

    ಶ್ರೀ ರಾಮಕೃಷ್ಣ ಸೇವಾಶ್ರಮ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರವಾಹ ಪರಿಹಾರ ಯೋಜನೆ ಆರಂಭ

    By adminSeptember 24, 2024No Comments2 Mins Read
    Shri Ramakrishna Sevashram

    ಶ್ರೀ ರಾಮಕೃಷ್ಣ ಸೇವಾಶ್ರಮ ಪಾವಗಡ ಹಾಗೂ ಇನ್ಫೋಸಿಸ್ ಫೌಂಡೇಷನ್ ಸಹಕಾರದೊಂದಿಗೆ ಕಳೆದ ಮೂರು ತಿಂಗಳುಗಳಿಂದ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರದೇಶಗಳಲ್ಲಿ ಪ್ರವಾಹ ಪರಿಹಾರ ಯೋಜನೆಯನ್ನು ಸ್ವಾಮಿ ಜಪಾನಂದಜೀ ಮಹಾರಾಜ್ ರವರ ನೇತೃತ್ವದಲ್ಲಿ ಯಶಸ್ವಿಯಾಗಿ ಮುಗಿಸಿದ್ದು, ಇದೀಗ ಆಂಧ್ರಪ್ರದೇಶದ ವಿಜಯವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಪರಿಹಾರ ಕಾರ್ಯ ನೆರವೇರಿಸಲು ಸೆ.23ರಿಂದ 26ರವರೆಗೆ ವಿಜಯವಾಡ ಪ್ರದೇಶದಲ್ಲಿ ಪರಿಹಾರ ಕಾರ್ಯ ನೆರವೇರಿಸಲು ಸ್ವಾಮಿ ವಿವೇಕಾನಂದ ತಂಡದೊಂದಿಗೆ ಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರು ತೆರಳುತ್ತಿದ್ದಾರೆ.

    ಮೊದಲನೇ ಹಂತದಲ್ಲಿ ಸರಿಸುಮಾರು ಎರಡು ಸಾವಿರ ಸಂತ್ರಸ್ತರಿಗೆ ವಿಜಯವಾಡದ ಅತ್ಯಂತ ದುಃಸ್ಥಿತಿಯಲ್ಲಿರುವ ಹಾಗೂ ಪ್ರವಾಹದಿಂದ ತತ್ತರಿಸಿರುವ ಪ್ರದೇಶಗಳಿಗೆ ಪರಿಹಾರ ನೀಡಲು ಆಂಧ್ರಪ್ರದೇಶದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಸತ್ಯಕುಮಾರ್ ಯಾದವ್ ಹಾಗೂ ಸ್ಥಳೀಯ ಮುಖಂಡರುಗಳು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆಯ ಕಾರ್ಯಕರ್ತರ ಮನವಿಯ ಮೇರೆಗೆ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.


    Provided by

    ಸ್ವಾಮಿ ಜಪಾನಂದಜೀ ಮಹಾರಾಜ್ ರವರ ಕಾರ್ಯವೈಖರಿಯನ್ನು ಅರಿತಿರುವ ಆಂಧ್ರಪ್ರದೇಶ ಸರ್ಕಾರದ ಧುರೀಣರುಗಳಾದ ಮುಖ್ಯಮಂತ್ರಿಗಳು, ನಾ.ರಾ.ಲೋಕೇಶ್, ಘನತೆವೆತ್ತ ಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಾದ ಪವನ್ ಕಲ್ಯಾಣ್ ರವರ ಪೂರ್ಣ ಸಹಕಾರದಿಂದ ಈ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಸ್ವಾಮೀಜಿಯವರು ತಿಳಿಸಿದ್ದಾರೆ.

    ಮೊದಲನೇ ಹಂತದ ಪ್ರಾರಂಭೋತ್ಸವವನ್ನು ವಿಜಯವಾಡದ ಅತ್ಯಂತ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಪ್ರದೇಶಗಳಿಂದ ಆರಂಭವಾಗುತ್ತಿದೆ. ಇದರ ಪ್ರಾರಂಭೋತ್ಸವವನ್ನು ಆರೋಗ್ಯ ಸಚಿವರಾದ ಸತ್ಯಕುಮಾರ್ ಯಾದವ್ ರವರಿಂದ ಉದ್ಘಾಟಿಸಲ್ಪಡುತ್ತಿದೆ. ಸ್ಥಳೀಯ ಶಾಸಕರುಗಳು, ಕಲೆಕ್ಟರ್, ಹಾಗೂ ಇತರ ಅಧಿಕಾರಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀ ರಾಮಕೃಷ್ಣ ಸೇವಾಶ್ರಮದ ಸಂಯೋಜಕರಾದ, ಹಿರಿಯ ವಕೀಲರು ಹಾಗೂ ಕಡಪ ಜಿಲ್ಲಾ ಬಿ.ಜೆ.ಪಿ. ಘಟಕದ ಅಧ್ಯಕ್ಷರೂ ಆದ ಸತೀಶ್ ಚಂದ್ರರವರು ಈ ಯೋಜನೆಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ.

    ಶ್ರೀ ರಾಮಕೃಷ್ಣ ಸೇವಾಶ್ರಮ ಕಳೆದ 35 ವರ್ಷಗಳಿಂದ ಮುಖ್ಯವಾಗಿ ದಕ್ಷಿಣ ಭಾರತದ ಆರು ರಾಜ್ಯಗಳಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂದರ್ಭಗಳಲ್ಲೆಲ್ಲಾ ಸೇವಾ ಯೋಜನೆಗಳನ್ನು ತತ್ಕ್ಷಿಣ ಕೈಗೊಂಡು ಸಂತ್ರಸ್ತರ ನೆರವಿಗೆ ಆಶ್ರಯಧಾತರಾಗಿ ಸೇವೆ ಸಲ್ಲಿಸುತ್ತಿರುವುದು ಗಮನಾರ್ಹ. ಸ್ವಾಮಿ ಜಪಾನಂದಜೀ ಮಹಾರಾಜ್, ಸ್ವಾಮಿ ವಿವೇಕಾನಂದ ಸ್ವಯಂಸೇವಾ ತಂಡ, ಸಮರ್ಪಣ ಇನ್ಫೋಸಿಸ್ ಸಿ.ಎಸ್.ಆರ್. ಬೆಂಗಳೂರು, ಮಮತ ಇನ್ಫೋಸಿಸ್ ಸಿ.ಎಸ್.ಆರ್. ಹೈದರಾಬಾದ್ ರವರ ಸಹಕಾರ ಅತ್ಯಮೂಲ್ಯವಾದುದಾಗಿದೆ. ಈ ಯೋಜನೆಯ ಮಾರ್ಗದರ್ಶನ ಪರಮ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರದ್ದು. ಅವರ ಕಾರ್ಯದಕ್ಷತೆ ಹಾಗೂ ಶ್ರದ್ಧೆ, ಅರ್ಪಣಾ ಮನೋಭಾವನೆ ಹಾಗೂ ಮತ್ತೆಲ್ಲದಕ್ಕಿಂತ ಮಿಗಿಲಾಗಿ ಮಾನವೀಯತೆಯ ಮೌಲ್ಯಗಳನ್ನು ಅನುಷ್ಠಾನರೂಪಕ್ಕೆ ತರಲು ಸ್ವಾಮೀಜಿಯವರು ಅಹರ್ನಿಷಿ ದುಡಿಯುತ್ತಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.