nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿ ನಿಲಯದ ಮೇಲೆ ದೂರು: ಜಂಟಿ ನಿರ್ದೇಶಕ ಕೃಷ್ಣಪ್ಪ ಭೇಟಿ ಪರೀಶೀಲನೆ | ಏನಿದು ಘಟನೆ?
    ಪಾವಗಡ September 26, 2024

    ವಿದ್ಯಾರ್ಥಿ ನಿಲಯದ ಮೇಲೆ ದೂರು: ಜಂಟಿ ನಿರ್ದೇಶಕ ಕೃಷ್ಣಪ್ಪ ಭೇಟಿ ಪರೀಶೀಲನೆ | ಏನಿದು ಘಟನೆ?

    By adminSeptember 26, 2024No Comments2 Mins Read
    hostel

    ತುಮಕೂರು: ನಗರದ ಎಂ.ಜಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಿಜ್ಞಾನ ಕಾಲೇಜು ಬಾಲಕರ ವಿದ್ಯಾರ್ಥಿನಿಲಯಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ದಾಂಧಲೆ ನಡೆಸಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ವಿದ್ಯಾರ್ಥಿನಿಲಯದಲ್ಲಿದ್ದ ವಾರ್ಡನ್, ರಾತ್ರಿ ಕಾವಲುಗಾರರು ಹಾಗೂ ವಿದ್ಯಾರ್ಥಿಗಳನ್ನು ವಿಚಾರಿಸಿ ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದರು.


    Provided by

    ವಿದ್ಯಾರ್ಥಿಗಳಿಂದ ಹೇಳಿಕೆ:

    ನಿಲಯಪಾಲಕರು ರೂ.ನಂ:17ರಲ್ಲಿ ವಾಸ್ತವ್ಯವಿದ್ದ ವಿದ್ಯಾರ್ಥಿಗಳಾದ ನಾಗರಾಜು ಜಿ.ಹೆಚ್, ಗೋಪಾಲ್ ರೆಡ್ಡಿ ಹಾಗೂ ರವಿಚಂದ್ರ ಆದ ನಮ್ಮನ್ನು ನಿಲಯಪಾಲಕರ ಕಚೇರಿಗೆ ಕರೆಸಿ ನಿಮ್ಮ ಕೊಠಡಿಯಲ್ಲಿ ಯಾರದಾರು ಅಪರಿಚತರು ಇದ್ದಾರೆಯೇ ಎಂದು ಕೇಳಿದರು. ಆಗ ನಾವು ಯಾರು ಇರುವುದಿಲ್ಲ ಎಂದು ತಿಳಿಸಿದೆವು. ನಂತರ ಪೊಲೀಸ್ ರವರು ಒಬ್ಬ ವ್ಯಕ್ತಿಯ ಭಾವಚಿತ್ರವನ್ನು ತೋರಿಸಿ ಇವರು ಏನಾದರೂ ತಮ್ಮ ಕೊಠಡಿಗೆ ಬಂದಲ್ಲಿ ನಮಗೆ ಮಾಹಿತಿ ನೀಡಲು ತಿಳಿಸಿ ನಮ್ಮನ್ನು ನಮ್ಮ ಕೊಠಡಿಗೆ ವಾಪಸ್ಸು ಕಳುಹಿಸಿಕೊಟ್ಟಿರುತ್ತಾರೆ. ನಮಗೆ ಪೊಲೀಸ್ ರವರಿಂದಾಗಲಿ ಅಥವಾ ಬೇರೆಯವರಿಂದಾಲಿ ಬಯ್ಯುವುದು, ಒತ್ತಾಯ ಮಾಡುವುದು, ಗಲಾಟೆ ಮಾಡಿರುವುದು, ತೊಂದರೆ ಉಂಟು ಮಾಡಿರುವುದು ಯಾವುದು ಸಹ ನಮ್ಮ ನಿಲಯದಲ್ಲಿ ಹಾಗಿರುವುದಿಲ್ಲ ಪತ್ರಿಕೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವಿಷಯವು ಸತ್ಯಕ್ಕೆ ದೂರವಾಗಿರುತ್ತದೆ ಎಂದು ವಿದ್ಯಾರ್ಥಿಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

    ಪಾವಗಡದ ಒಬ್ಬ ಪೊಲೀಸ್ ಪೇದೆ ಹಾಗೂ ತುಮಕೂರಿನ ಸ್ಥಳೀಯ ಪೊಲೀಸ್ ಪೇದೆ ಹೆಣ್ಣು ಮಕ್ಕಳ ಪೋಷಕರು ಸೇರಿದಂತೆ ನಿಲಯಪಾಲಕರನ್ನು ನಿಲಯದಲ್ಲಿ ಹೆಣ್ಣು ಮಕ್ಕಳನ್ನು ಅಪಹರಿಸಿಕೊಂಡು ಬಂದಿರುವ ಆರೋಪಿ, ತಮ್ಮ ನಿಲಯದಲ್ಲಿ ಅಡಗಿರುವ ಬಗ್ಗೆ ಮಾಹಿತಿ ಪಡೆಯಲು ಅವಕಾಶ ಮಾಡಿಕೊಡಲು ಕೋರಿರುವ ಮೇರೆಗೆ ನಿಲಯಪಾಲಕರು ಸಹ ನಾನೇ ಖುದ್ದು ನಿಲಯಕ್ಕೆ ಭೇಟಿ ಮಾಡಿ ರೂ.ನಂ:17ರ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿರುತ್ತದೆ.

    ಇದರಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದಿಲ್ಲ. ಆರೋಪಿ ಅಪರಿಚಿತರು ಯಾರು ನಮ್ಮ ನಿಲಯದಲ್ಲಿ ವಾಸ್ತವ್ಯವಿರುವುದಿಲ್ಲ ಎಂದು ನಿಲಯಪಾಲಕರು ಹಾಗೂ ರಾತ್ರಿಕಾವಲುಗಾರರು ಸಹ ಪೋಲೀಸರಿಗೆ ತಿಳಿಸಿದ ಮೇರೆಗೆ ಪೊಲೀಸರು ಹಾಗೂ ಹೆಣ್ಣು ಮಕ್ಕಳ ಪೋಷಕರು ಅಲ್ಲಿಂದ ಹಿಂದಿರುಗಿರುತ್ತಾರೆ ಎಂದು ಹೇಳಿಕೆ ನೀಡಿರುತ್ತಾರೆ.

    ಒಟ್ಟಾರೆ ನಿಲಯಲ್ಲಿ ಹೆಣ್ಣು ಮಕ್ಕಳ ಪೋಷಕರು ಹಾಗೂ ಪೊಲೀಸರು ಬಂದು ಒತ್ತಾಯಿಸಿದ ಮೇರೆಗೆ ರೂ.ನಂ:17ರ ವಿದ್ಯಾರ್ಥಿಗಳನ್ನು ನಿಲಯಪಾಲಕರ ಮೂಲಕ ವಿಚಾರಿಸಿ ಮಾಹಿತಿ ನೀಡಿ ಕಳುಹಿಸಲಾಗಿರುತ್ತದೆ.

    ವಿದ್ಯಾರ್ಥಿನಿಲಯದಲ್ಲಿ ಯಾವುದೇ ದೌರ್ಜನ್ಯ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಬಯ್ಯುವುದು ಕಿರುಕುಳ ನೀಡಿರುವುದು ಕಂಡುಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.