nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026
    Facebook Twitter Instagram
    ಟ್ರೆಂಡಿಂಗ್
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    • ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷ ಲೇಖನ | ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನಕ್ಕೆ ಜಿಲ್ಲೆಯ 31 ಗ್ರಾಮಗಳು ಆಯ್ಕೆ
    ಲೇಖನ September 27, 2024

    ವಿಶೇಷ ಲೇಖನ | ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನಕ್ಕೆ ಜಿಲ್ಲೆಯ 31 ಗ್ರಾಮಗಳು ಆಯ್ಕೆ

    By adminSeptember 27, 2024No Comments2 Mins Read

    ಬುಡಕಟ್ಟು ಬಹುಸಂಖ್ಯಾತ ಗ್ರಾಮಗಳು ಮತ್ತು ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಬುಡಕಟ್ಟು ಕುಟುಂಬಗಳಿಗೆ ಸಂಪೂರ್ಣತೆಯನ್ನು ಸಾಧಿಸುವ ಮೂಲಕ, ಬುಡಕಟ್ಟು ಸಮುದಾಯಗಳ ಸಾಮಾಜಿಕ–ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನ ಕಾರ್ಯಕ್ರಮ ದೇಶದಾದ್ಯಂತ ನಡೆಯಲಿದೆ. ಈ ಅಭಿಯಾನವು ಬುಡಕಟ್ಟು ಪ್ರದೇಶಗಳಲ್ಲಿ ಭಾರತ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಸಾಮಾಜಿಕ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಜೀವನೋಪಾಯದಲ್ಲಿನ ನಿರ್ಣಾಯಕ ಅಂತರವನ್ನು ನಿವಾರಿಸುವ ಗುರಿಯನ್ನು ಹೊಂದಿದ್ದು, ಬುಡಕಟ್ಟು ಪ್ರದೇಶಗಳಲ್ಲಿ ಕಲಿಕೆ ಮತ್ತು ಯಶಸ್ಸಿನ ಆಧಾರದ ಮೇಲೆ ಬುಡಕಟ್ಟು ಪ್ರದೇಶಗಳು ಮತ್ತು ಸಮುದಾಯಗಳ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಖಚಿತಪಡಿಸಲಿದೆ.

    ಈ ಯೋಜನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚಾಗಿರುವ ವಿವಿಧ ತಾಲೂಕುಗಳ ಒಟ್ಟು 31 ಗ್ರಾಮಗಳನ್ನು , ಕೇಂದ್ರ ಬುಡಕಟ್ಟು ಮಂತ್ರಾಲಯದಿಂದ ಪ್ರಧಾನ ಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿ ಪಡಿಸಲು ಆಯ್ಕೆ ಮಾಡಿದ್ದು, ಸದರಿ ಗ್ರಾಮಗಳಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೂಲಭೂತ ಸೌಕರ್ಯ, ಆರ್ಥಿಕ ಸಬಲೀಕರಣ, ಉತ್ತಮ ಶಿಕ್ಷಣಕ್ಕೆ ಪ್ರವೇಶ ಮತ್ತು ಆರೋಗ್ಯಕರ ಗೌರವಾನ್ವಿತ ಜೀವನ ಈ ಎಲ್ಲಾ ಗುರಿಗಳೊಂದಿಗೆ ಗ್ರಾಮಗಳ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ.

    ಈ ಅಭಿಯಾನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಿರಿಸಿದ ರೂ.79,156 ಕೋಟಿಗಳಲ್ಲಿ ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆ ಇರುವ ದೇಶದ 63,000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ರೂಪಿಸಿ, ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯೊಂದಿಗೆ 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2024–25 ರಿಂದ 2028–29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024–25 ರಿಂದ 2025–26 ನೇ ಸಾಲಿಗೆ ರೂ.4,000 ಕೋಟಿ ಅನುದಾನವನ್ನು ಈ ಯೋಜನೆಗೆ ನಿಗದಿ ಮಾಡಲಾಗಿದೆ.

    ಈ ಅಭಿಯಾನದಡಿ ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಜನಾಂಗದವರು ಹೆಚ್ಚಾಗಿರುವ 31 ಗ್ರಾಮಗಳನ್ನು ಆಯ್ಕೆ ಮಾಡಿ ಭೌತಿಕ ಗುರಿ ನಿಗಧಿಪಡಿಸಲಾಗಿದ್ದು, 17 ವಿವಿಧ ಇಲಾಖೆಗಳು ಬೇರೆ ಬೇರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಕ್ಕಾ ಮನೆ, ಸಂಪರ್ಕ ರಸ್ತೆಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ನೀರು ಸರಬರಾಜು, ವಿದ್ಯುತ್ ಇಲಾಖೆಯಿಂದ ಮನೆಗಳಿಗೆ ವಿದ್ಯುದ್ದೀಕರಣ, ಇಂಧನ ಇಲಾಖೆಯಿಂದ ಸೌರ ವಿದ್ಯುತ್ ಯೋಜನೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯಿಂದ ಎಲ್.ಪಿ.ಜಿ ಅನಿಲ ಪಿ.ಎಂ ಉಜ್ವಲ ಯೋಜನೆಯಡಿ ಸಂಪರ್ಕಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಪೋಷಣ್ ಅಭಿಯಾನ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಆಯುಷ್ ಇಲಾಖೆಯಿಂದ ಪೋಷಣ್ ವಾಟಿಕಾಸ್, ಟೆಲಿಕಾಂ ಇಲಾಖೆಯಿಂದ ಯುನಿವರ್ಸಲ್ ಸೇವೆ (ನೆಟ್) ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಸ್ಕಿಲ್ ಇಂಡಿಯಾ, ಮಾಹಿತಿ ತಂತ್ರಾಜ್ಞಾನ, ಎಲೆಕ್ಟ್ರಾನಿಕ್ಸ್ ಇಲಾಖೆಯಿಂದ ಡಿಜಿಟಲ್ ಇನಿಶಿಯೇಟಿವ್ಸ್, ಕೃಷಿ ಇಲಾಖೆಯಿಂದ ಸುಸ್ಥಿರ ಕೃಷಿ ಉತ್ತೇಜನ, ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆಗೆ ಬೆಂಬಲ, ಪಶುಸಂಗೋಪನೆ ಇಲಾಖೆಯಿಂದ ಜಾನುವಾರು ಪಾಲನೆ, ಪಂಚಾಯತ್ ರಾಜ್ ಇಲಾಖೆಯಿಂದ ಸಾಮರ್ಥ್ಯ ಕಟ್ಟಡ ನಿರ್ಮಾಣ, ಪ್ರವಾಸೋದ್ಯಮ ಇಲಾಖೆಯಿಂದ ಟ್ರೈಬಲ್ ಹೋಂ ಸ್ಟೇಸ್ ಸ್ವದೇಶ ದರ್ಶನ, ಬುಡಕಟ್ಟು ವ್ಯವಹಾಗಳ ಸಚಿವಾಲಯದಿಂದ ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಗಳು ಅನುಷ್ಠಾನಗೊಳ್ಳಲಿವೆ.

    ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನದಡಿ ಜಿಲ್ಲೆಯಲ್ಲಿ,ಹಳಿಯಾಳ ತಾಲೂಕಿನ 1, ಭಟ್ಕಳದ 3 ಜೋಯಿಡಾದ 4 ಮತ್ತು ಮುಂಡಗೋಡ ತಾಲೂಕಿನ 23 ಸೇರಿದಂತೆ ಒಟ್ಟು 31 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾಮಗಳಲ್ಲಿ ಬುಡಕಟ್ಟು ಬಹು ಉಪಯೋಗಿ ಮಾರ್ಕೇಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿ ನಿಲಯಗಳು ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸಲಾಗುವುದು. ಸಿಕಲ್ ಸೇಲ್ ಪರೀಕ್ಷಾ ಕೇಂದ್ರ ಮತ್ತು ಕೌನ್ಸಿಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ, ಉತ್ಪನ್ನಗಳ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಲಾಗುತ್ತದೆ.

    –ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾಧಿಕಾರಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ,…

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.