ಬೆಂಗಳೂರು: ದಕ್ಷ, ಜನಪರ ಅಧಿಕಾರಿಯಾಗಿ ಹೆಸರುವಾಸಿಯಾಗಿರುವ ಬೇಲೂರು ತಹಶೀಲ್ದಾರ್ ಮಮತಾ ಅವರಿಗೆ ವೃಕ್ಷಮಾತೆ ಪದ್ಮಶ್ರೀ ಸಾಲುಮರದ ಸಾಲುಮರದ ತಿಮ್ಮಕ್ಕ ರವರ 113 ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಗುರುವಾರ “ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್” ಪ್ರದಾನ ಮಾಡಲಾಯಿತು.
ವೃಕ್ಷಮಾತೆ ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಇವರ ಸಮಕ್ಷಮದಲ್ಲಿ ಗೃಹ ಮಂತ್ರಿಗಳಾದ ಡಾ.ಜಿ ಪರಮೇಶ್ವರ್ ಅರಣ್ಯಸಚಿವರಾದ ಈಶ್ವರ ಕಂಡ್ರೆ ಇವರು ಪ್ರಶಸ್ತಿ ಪ್ರದಾನ ಮಾಡಿದರು.
ತಹಶೀಲ್ದಾರ್ ಮಮತಾ ಅವರ ಪರಿಸರದ ಹಿತಾಸಕ್ತಿ, ಹಸಿರು ಬೆಳವಣಿಗೆ ಮತ್ತು ಜನಸೇವೆಯಲ್ಲಿನ ಕಾಳಜಿ ಹಾಗೂ ಪ್ರಾಮುಖ್ಯತೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಪ್ರಶಸ್ತಿ ಸ್ವೀಕರಿಸಿದ ತಹಶೀಲ್ದಾರ್ ಮಮತಾ ಅವರಿಗೆ ಕಾಳಜಿ ಪೌಂಡೇಶನ್(ರಿ.) ತುಮಕೂರು ಮತ್ತು G & S Law Chambers, ತುಮಕೂರು ಸಂಸ್ಥೆಗಳು ಅಭಿನಂದನೆಗಳನ್ನು ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q