ಅಗರ್ತಲಾ: ಭಾರತವಿಲ್ಲದೆ ಬಾಂಗ್ಲಾದೇಶದ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ ಎಂದು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಹೇಳಿದ್ದಾರೆ.
ವಿಶ್ವ ಪ್ರವಾಸೋದ್ಯಮ ದಿನದ ಸರ್ಕಾರಿ ಸಮಾರಂಭದಲ್ಲಿ ಅವರು ಮಾತನಾಡಿ, ಬಾಂಗ್ಲಾದೇಶದ ಜನರು ತಮ್ಮ ಸ್ವಾತಂತ್ರ್ಯಕ್ಕೆ ಭಾರತ ನೀಡಿದ ಕೊಡುಗೆಯನ್ನು ಸ್ಮರಿಸಬೇಕು ಎಂದು ಹೇಲಿದ್ದಾರೆ.
ನಾವು ಬಾಂಗ್ಲಾದೇಶಕ್ಕೆ ವಿಮಾನ ಸೇವೆಗಳು ಪ್ರಾರಂಭವಾಗುತ್ತವೆ ಎಂದು ಭಾವಿಸಿದ್ದೇವೆ, ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತವಿಲ್ಲದೆ, ಬಾಂಗ್ಲಾದೇಶದ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲದ ಕಾರಣ ಇದು ಖಂಡಿತವಾಗಿ ಸಂಭವಿಸುತ್ತದೆ ಎಂದಿದ್ದಾರೆ.
ಅವರು ಅದನ್ನು ಅರ್ಥಮಾಡಿಕೊಳ್ಳಬೇಕು. ನಮ್ಮ ಸೇನೆ ಮಾಡಿದ ತ್ಯಾಗ ಮತ್ತು ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಜನರು ನೀಡಿದ ಸಹಾಯವನ್ನು ಮರೆಯಬಾರದು ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296