nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಲಾಂತರಿ ಬೀಜ ತಳಿಯನ್ನು ಕಾಲಿನಲ್ಲಿಒದ್ದು ತಿರಸ್ಕಾರ ಮಾಡಬೇಕು: ರೈತ ಮುಖಂಡ ಗಂಗಾಧರ್ ಕರೆ
    ತುಮಕೂರು October 1, 2024

    ಕುಲಾಂತರಿ ಬೀಜ ತಳಿಯನ್ನು ಕಾಲಿನಲ್ಲಿಒದ್ದು ತಿರಸ್ಕಾರ ಮಾಡಬೇಕು: ರೈತ ಮುಖಂಡ ಗಂಗಾಧರ್ ಕರೆ

    By adminOctober 1, 2024No Comments3 Mins Read
    protest

    ತುಮಕೂರು: 116 ದೇಶಗಳಲ್ಲಿ ತಿರಸ್ಕಾರ ಮಾಡಿರುವ ಕುಲಾಂತರಿ ಬೀಜ ತಳಿಯನ್ನು ನಮ್ಮದೇಶದಲ್ಲಿ ತರಲು ಹೊರಟಿರುವುದು ವಿಪರ್ಯಾಸ. ಇದರಿಂದ ಪರಿಸರ, ಜೀವವೈಧ್ಯತೆ ಅಷ್ಟೇ ಅಲ್ಲದೆ, ಮಾನವನ ವಿಕಾಸದಲ್ಲೂಅನಾಹುತವೇ ಸಂಭವಿಸಲಿದೆ. ಆದ್ದರಿಂದ ರೈತರು ಮಾತ್ರವಲ್ಲದೆ, ಪಟ್ಟಣದಲ್ಲಿರುವ ಜನರೂ ಕುಲಾಂತರಿ ನೀತಿಯನ್ನು ಕಾಲಿನಲ್ಲಿಒದ್ದುತಿರಸ್ಕಾರ ಮಾಡಬೇಕು ಎಂದುರೈತ ಸಂಘ ಹಾಗೂ ಹಸಿರು ಸೇನೆಯ ಕೆ.ಟಿ. ಗಂಗಾಧರ್ ಕರೆ ನೀಡಿದರು.

    ಗಾಂಧೀ ಸಹಜ ಬೇಸಾಯ ಆಶ್ರಮದ ವತಿಯಿಂದ ‘ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿನ ನಿರ್ದೇಶನದಂತೆ ಬೇಯರ್ ಮತ್ತು ಮಾನ್ಸೆಂಟೋ ಕಂಪನಿಗಳ ಸಹಯೋಗದಲ್ಲಿ ತರಲು ಹೊರಟಿರುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯನ್ನು ವಿರೋಧಿಸಿ ಹಮ್ಮಿಕೊಂಡಿರುವ ಗ್ರಾಮಾಂತರದ ಹ್ಯಾಂಡ್ ಪೋಸ್ಟ್ ನ ದೊಡ್ಡ ಹೊಸೂರಿನ ಎರಡನೇ ದಿನದ ಸತ್ಯಾಗ್ರಹ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


    Provided by
    Provided by

    ತ್ರೇತಾಯುಗದಲ್ಲಿ ರಾಮ ಸೀತೆಯೂ ಕೃಷಿ ಮಾಡಿದ್ದರು. ಭರತ ಖಂಡದಲ್ಲಿ ಕೃಷಿಗೆ ಪೂರಕವಾದ ವಾತಾವರಣವಿದೆ. ಇಲ್ಲಿನ ಕೃಷಿಗೆ ಶೇ.75 ರಷ್ಟು ಪ್ರಾಕೃತಿಕ ಬೆಂಬಲವಿದ್ದು, ಶೇ.25 ರಷ್ಟು ಮಾತ್ರವೇ ಮಾನವನ ಶ್ರಮವಿರುತ್ತದೆ. ಆದ್ದರಿಂದಲೇ ನಮ್ಮದು ಬಹುಪಾಲು ಕೃಷಿ ಪ್ರಧಾನವಾದ ಸಂಪದ್ಭರಿತ ರಾಷ್ಟ್ರ ಈ ಸಾರ್ವಭೌಮತೆಯನ್ನು ವಶಕ್ಕೆ ಪಡೆಯಲು ಬಹುರಾಷ್ಟ್ರೀಯ ಕಂಪನಿಗಳು ಹುನ್ನಾರ ನಡೆಸಿವೆ. ದೇಶೀ ಬೆಳೆಗಳನ್ನು ನಾಶ ಮಾಡಿಕುಲಾಂತರಿ ವ್ಯವಸ್ಥೆಯನ್ನುತರುವ ಮೂಲಕ ನಮ್ಮ ಕೃಷಿ ವ್ಯವಸ್ಥೆಯನ್ನು ನಿಯಂತ್ರಣ ಮಾಡಲು ಯೋಜನೆಯೇ ರೂಪಿಸಿವೆ. ಅನ್ನ ಹಾಕುವ ರೈತರನ್ನುಗ್ರಾಹಕರನ್ನಾಗಿ ಮಾರ್ಪಾಡು ಮಾಡುವದೊಡ್ಡ ಸಂಚು ನಡೆದಿದೆ ಎಂದು ಅವರು ವಿವರಿಸಿದರು.

    ಹಸಿರು ಕ್ರಾಂತಿಯಿಂದಾದ ಹಾನಿಯಿಂದ ಇನ್ನೂ ಚೇತರಿಸಿಕೊಳ್ಳಲು ಆಗಿಲ್ಲ. ಈಗ 3ನೇ ಕೃಷಿ ಕ್ರಾಂತಿತರಲು ಹೊಂಚು ಹಾಕುತ್ತಿದ್ದಾರೆ. ಇದನ್ನು ನಾವು ವಿರೋಧಿಸಬೇಕು. ನಮ್ಮಧ್ವನಿ ಹಾಗೂ ಪ್ರತಿಭಟನೆಗಳ ಸಾಮರ್ಥ್ಯ ಹೆಚ್ಚಾದರೆ ಸಂವಿಧಾನಾತ್ಮಕವಾಗಿಯೂ ಮಹತ್ವ ದೊರೆಯಲಿದ್ದು, ಸರ್ಕಾರಗಳಿಗೆ ಚಳವಳಿಗಳ ಮೂಲಕವೇ ಅರ್ಥ ಮಾಡಿಸೋಣ ಎಂದು ನಿರ್ಧಾರಕೈಗೊಂಡರು.

    ರೈತ ಸಂಘದ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರಿ ವಿಜ್ಞಾನಿಗಳು ಮಾರಾಟವಾಗಿದ್ದಾರೆ. ವೈದ್ಯರು ವ್ಯಾಪಾರಿಗಳಾಗಿದ್ದಾರೆ. ಆರೋಗ್ಯ ಮತ್ತು ವಿಜ್ಞಾನ ಕ್ಷೇತ್ರವೇ ಹಣಗಳಿಕೆಗೆ ಮೀಸಲಾಗಿದೆ. ಹಳಿತಪ್ಪಿರುವ ವ್ಯವಸ್ಥೆ ಸರಿ ಮಾಡುವವರು ಯಾರು ಎಂಬುದೇ ಪ್ರಶ್ನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ರಾಜಕೀಯ ಹಾಗೂ ವ್ಯಾಪರದಂತೆ ಕೃಷಿಯಲ್ಲಿಯೂ ಸಂಸ್ಕೃತಿ ಕಣ್ಮರೆಯಾಗಿದೆ. ಪುಟ್ಟ ಮಕ್ಕಳಿಗೆ ಡಯಾಬಿಟೀಸ್ ಅಂಟಿಕೊಂಡಿದೆ. ನಾಲ್ಕು ವರ್ಷದ ಹೆಣ್ಣುಮಕ್ಕಳು ಋತುಮತಿಯಾಗುತ್ತಿದ್ದಾರೆ. ಮತ್ತೊಂದು ಕಡೆ ಅಪೌಷ್ಠಿಕತೆ ಕಾಡುತ್ತಿದೆ. ಈಗ ಅನ್ನತಿನ್ನುವವರೆಲ್ಲರೂ ಎಚ್ಚೆತ್ತುಕೊಳ್ಳಬೇಕಾದ ಕಾಲ ಬಂದಿದೆ. ಇಲ್ಲವಾದರೆ ಆಹಾರ ಕ್ಷೇತ್ರ ಅಧೋಗತಿ ತಲುಪಲಿದೆ ಎಚ್ಚರಿಸಿದರು.

    ಭೂಮಿಗೂ ನಮಗೂ ಭಾವನಾತ್ಮಕ ಸಂಬಂಧವಿದ್ದು, ಕೃಷಿ ಸಂಸ್ಕೃತಿ ಆಧಾರಿತ ಉದ್ಯೋಗ ತಂದುಕೊಟ್ಟಿದೆ. ನಮ್ಮ ಸಂಸ್ಕೃತಿ ಉಳಿಯಬೇಕೆಂದರೆ ಭೂಮಿಯನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ದೊಡ್ಡ ಹೊಸೂರು ಸತ್ಯಾಗ್ರಹ ದಾಖಲೆಯಾಗಿ ಉಳಿಯಲಿದೆ. ಸತ್ಯಾಗ್ರಹಕ್ಕೆ ತನ್ನದೇಆದ ಶಕ್ತಿ ಇದ್ದು, ಅದಕ್ಕೆ ಸಾಕ್ಷಿಯಾಗಿ ಮಹಾತ್ಮಗಾಂಧಿ ನಮ್ಮೆದುರಿಗಿದ್ದಾರೆ ಎಂದು ರೈತರನ್ನು ಹುರಿದುಂಬಿಸಿದರಲ್ಲದೆ, ಎಲ್ಲಾ ರಾಜಕೀಯ ಪಕ್ಷಗಳು ಬಂಡವಾಳ ಶಾಹಿಗಳ ಪರವಿರುವುದರಿಂದ ನಾವು ಸ್ಥಳೀಯ ಮಟ್ಟದಿಂದಲೇ ಚಳಚಳಿಗಳನ್ನು ಕಟ್ಟಬೇಕು ಎಂದು ಸಲಹೆ ನೀಡಿದರು.
    ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಮಾತನಾಡಿ, ನಮ್ಮದೇಶದ ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಪರಿಸರದ ಮೇಲೆ ಅವ್ಯಾಹತವಾಗಿ ದಾಳಿ ನಡೆಯುತ್ತಿದೆ. ಕೃಷಿ, ಕಲೆ, ಸಾಹಿತ್ಯ, ಆಡಳಿತ, ಸಂಸ್ಕೃತಿ ಒಂದಕ್ಕೊಂದು ಅಂತರ ಸಂಬಂಧ ಹೊಂದಿದ್ದು, ಈ ವ್ಯವಸ್ಥೆಯನ್ನು ಸರಿ ಮಾಡಬೇಕಾದರೆ ಮಸನೋಬು ಫುಕುವೋಕ, ಜೆ.ಸಿ.ಕುಮಾರ್, ಮಹಾತ್ಮಗಾಂಧಿ ಅವರತತ್ವದಡಿಯಲ್ಲಿ ಹೋರಾಟಗಳು ಮುನ್ನಡೆಯಬೇಕು ಎಂದರು.

    ನಮ್ಮ ದೇಶದಲ್ಲಿಒಂದು ಲಕ್ಷಕ್ಕೂಅಧಿಕ ರೀತಿಯ ಭತ್ತದ ತಳಿಗಳಿದ್ದವು. ಅವೆಲ್ಲವೂ ಈಗ ನಾಶವಾಗಿ ಕುಲಾಂತರಿ ಭತ್ತರಾರಾಜಿಸುತ್ತಿದೆ. ಜಪಾನ್ ಹಾಗೂ ಚೀನಾದಲ್ಲಿ ಕುಲಾಂತರಿ ಮನುಷ್ಯರನ್ನು ಸೃಷ್ಟಿ ಮಾಡಲಾಗಿದೆ. ಇದು ಪ್ರಕೃತಿ ವಿರುದ್ಧವಾದುದು. ಹೀಗೇ ಮುಂದುವೆರೆದರೆ 2050ರ ಹೊತ್ತಿಗೆ ಭೂಮಂಡಲ ವಿನಾಶವಾಲಿದೆ ಎಂದು ನಾಸಾ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

    ಪರಿಸರಕ್ಕೆ ಪೂರಕವಾದ ನೈಸರ್ಗಿಕ ಕೃಷಿ ಮಾಡಬೇಕು. ನಾವು ತಿನ್ನುವ ಆಹಾರ ಉತ್ತಮವಾಗಿದ್ದರೆ ಮನಸ್ಥಿತಿ ಮತ್ತುಆರೋಗ್ಯ ಉತ್ತಮವಾಗಿರುತ್ತದೆ. ಸಮಾಜದ ಬಗ್ಗೆ ಕಾಳಜಿ ವಹಿಸಬೇಕಾದ ಸಾಹಿತಿಗಳು ಮರ್ಯಾದೆ ಇಲ್ಲದಂತೆ ವರ್ತಿಸುತ್ತಿದ್ದು, ಸಣ್ಣಪುಟ್ಟ ರಾಜಕಾರಣಿಗಳಿಗೆ ಆ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂದುಚಾಟಿ ಬೀಸಿದರು.

    ಈ ಸಂದರ್ಭದಲ್ಲಿ ಅಖಿಲ ಭಾರತ ಕೃಷಿ ಕಾರ್ಮಿಕ ಸಂಘದ ಎಸ್.ಎನ್ ಸ್ವಾಮಿ, ಕರ್ನಾಟಕ ರಾಜ್ಯರೈತ ಸಂಘದ ಜಿಲ್ಲಾಧ್ಯಕ್ಷಎ.ಗೋವಿಂದರಾಜು, ಹೋರಾಟಗಾರರಾದ ಶಾಂತಕೃಷ್ಣ, ತನುಜ, ನೇತ್ರಾವತಿ, ಶಾರದಾ, ಬಿ.ಮರುಳಯ್ಯ, ಕೃಷಿ ವಿಜ್ಞಾನಿ ಡಾ.ಮಂಜುನಾಥ್, ಪರಿಸರವಾದಿ ಸಿ.ಯತಿರಾಜು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ…

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.