ಪಾವಗಡ: ತಾಲೂಕಿನಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ವಿವಿಧೆಡೆ ಅನೇಕ ಹಳೆಯ ಮನೆಗಳು ಮೇಲ್ಚಾವಣಿ ಕುಸಿದಿದೆ. ಕೆಲವು ಮನೆಗಳಿಗೆ ಮಳೆಯ ನೀರು ನುಗ್ಗಿದೆ. ಮಳೆಯ ತೀವ್ರತೆಗೆ ಮೇಕೆ ಮರಿಗಳು ಸಹ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಏಳು ಗಂಟೆಗೆ ನಡೆದಿದೆ.
ಪಾವಗಡ ತಾಲೂಕಿನ ಸಿಂಗರೆಡ್ಡಿಹಳ್ಳಿ, ಗಂಗಸಾಗರ, ಕ್ಯಾತಗಾನಕೆರೆ, ಬೆಳ್ಳಿ ಬಟ್ಟಲು ಗ್ರಾಮಗಳಲ್ಲಿ ತಲಾ ಒಂದು ಮನೆಯ ಮೇಲ್ಚಾವಣಿ ಕುಸಿದಿದ್ದು ಸಾಸನಕುಂಟೆ ಗ್ರಾಮದಲ್ಲಿ ಎರಡು ಮನೆಗಳ ಮೇಲ್ಚಾವಣಿ ಕುಸಿದು ಬಿದ್ದಿದ್ದು, ವದನಕಲ್ಲು ಗ್ರಾಮದ ಸಣ್ಣೀರಪ್ಪ ಎನ್ನುವವರಿಗೆ ಸೇರಿದ ಮೂರು ಮೇಕೆ ಮರಿಗಳು ಮಳೆಯಲ್ಲಿ ನೆನೆದು ಸಾವನ್ನಪ್ಪಿದೆ.
ಮತ್ತೊಂದೆಡೆ ತಾಲೂಕಿನ ನಾಗಲಮಡಿಕೆ ಡ್ಯಾಂ ಸೇರಿದಂತೆ ಮತ್ತಿತರ ಕೆರೆಗಳಲ್ಲಿ ನೀರು ಶೇಖರಣೆಯಾಗುತ್ತಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದರೆ. ಕಟಾವು ಹಂತದಲ್ಲಿರುವ ಶೇಂಗಾ ಸೇರಿದಂತೆ ಮತ್ತಿತರ ಬೆಳೆಗಳ ಪಸಲು ಪಡೆಯಲು ರೈತರು ವಾರಸಾಹಾಸ ಪಡುತ್ತಿದ್ದು ನಷ್ಟದ ಭಯದಿಂದ ಜೀವನ ನಡೆಸುತ್ತಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q