ಬಿಗ್ ಬಾಸ್ ಕನ್ನಡ ಸೀಜನ್ 11 ಆರಂಭವಾಗಿದ್ದು, ಮೂರನೇ ವಾರ ನಡೆಯುತ್ತಿದೆ. ಬಿಗ್ ಬಾಸ್ ಎಂದರೆ ಪ್ರೇಕ್ಷಕರಿಗೆ ಅಚ್ಚುಮೆಚ್ಚಿನ ಕಾರ್ಯಕ್ರಮ ಕೂಡ ಹೌದು.ಆದರೆ ಇತ್ತೀಚಿಗೆ ಬಿಗ್ ಬಾಸ್ ಕನ್ನಡ ಪ್ರೇಕ್ಷರನ್ನು ಭಾರೀ ನಿರಾಸೆಗೊಳಿಸುತ್ತಿದೆ.
ವರ್ಷದಿಂದ ವರ್ಷಕ್ಕೆ ಈ ಕಾರ್ಯಕ್ರಮ ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಈ ಬಾರಿಯ ಸೀಜನ್ ಗಂತೂ ಜನ ಕ್ಯಾರೇ ಎನ್ನದೇ ಅಸಮಾಧಾನ ಹೊರಹಾಕುತ್ತಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಜನ್ 11 ಆರಂಭವಾದ ದಿನದಿಂದಲೂ ಜಗಳ, ಬೈಗುಳ ಹೊಡೆದಾಟ ಮಿತಿ ಮೀರಿದ ವರ್ತನೆಯೇ ಹೆಚ್ಚಾಗಿದೆ. ದೈಹಿಕ ಹಲ್ಲೆ, ಕೊಳಕು ಮಾತು, ಕೆಟ್ಟ ವರ್ತನೆಗಳೇ ಹೆಚ್ಚಾಗಿದೆ. ಒಂದೆಡೆ ಮಹಿಳೆಯರಿಗೆ ಅಪಮಾನವಾಗುವಂತೆ ಒಬ್ಬ ಸ್ಪರ್ಧಿ ಬೈದರೆ, ಮತ್ತೊಂದೆಡೆ ಆ ಸ್ಪರ್ಧಿಯನ್ನು ಪ್ರಚೋದಿಸುವ ಮಾತುಗಳನ್ನು ಮಹಿಳಾ ಸ್ಪರ್ಧಿಗಳೇ ಆಡುತ್ತಾರೆ. ಇದರಿಂದ ಜಗಳ ಆರಂಭವಾಗಿ ಮೊದಲು ಇಬ್ಬರು ಕೊನೆಗೆ ಎಲ್ಲರೂ ಸೇರಿ ಅದು ಅತಿರೇಖಕ್ಕೆ ಹೋಗಿ ಕೈ ಕೈ ಮಿಲಾಯಿಸಿದ ಪ್ರಸಂಗ ಕೂಡ ನಡೆದಿದೆ.
ಹುಚ್ಚ ವೆಂಕಟ್ ಸೇರಿದಂತೆ ಕೆಲವು ಸ್ಪರ್ಧಿಗಳು ಮಿತಿ ಮೀರಿದ ವರ್ತನೆ ತೋರಿದ ಘಟನೆಗಳು ಬಿಗ್ ಬಾಸ್ ನಲ್ಲಿ ನಡೆದಿದೆ. ಆದರೆ ಈ ಬಾರಿಯ ಸೀಜನ್ನಂತೂ ಜಗಳದಲ್ಲಿ ಶೋನೋ..ಶೋನಲ್ಲಿ ಜಗಳವೋ ಎನ್ನುವ ಗೊಂದಲದಲ್ಲಿ ಪ್ರೇಕ್ಷಕರು ಚಾನೆಲ್ ಬದಲಿಸುವ ಪರಿಸ್ಥಿತಿ ಎದುರಾಗಿದೆ.
ಇದೇ ರೀತಿಯಲ್ಲಿ ಮುಂದುವರಿದರೆ ಈ ರಿಯಾಲಿಟಿ ಶೋ ಶೀಘ್ರದಲ್ಲೇ ಪ್ರಸಾರವನ್ನು ಕಾಯಂ ರದ್ದುಪಡಿಸಬೇಕಾದ ಪರಿಸ್ಥಿತಿ ಬರುವುದೇ ಎನ್ನುವ ಅನುಮಾನ ಪ್ರೇಕ್ಷಕರದ್ದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296