ಪಾವಗಡ: ದೇವಲಕೆರೆ ಗ್ರಾಮದಲ್ಲಿವಿಶ್ವಕ್ಕೆ ಮಹಾನ್ ಗ್ರಂಥ ರಾಮಾಯಣವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಗ್ರಾಮದಲ್ಲಿ ನಡೆಯಿತು.
ವಿಶ್ವಕವಿ ಸಮಾನತೆಯ ಹರಿಕಾರ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿ ನಿಡಗಲ್ಲು ವಾಲ್ಮೀಕಿ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ, ಸೂರ್ಯ ಚಂದ್ರ ಭೂಮಿ ಇರುವರೆಗೂ ಶ್ರೀ ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಅಜರಾಮರವಾಗಿರುತ್ತದೆ. ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣದಿಂದ ಶ್ರೀ ರಾಮನ ತತ್ವ ಆದರ್ಶಗಳು ಜಗತ್ತಿನಲ್ಲಿ ತಿಳಿಯುತ್ತವೆ. ಇಂತಹ ಮೇರು ಕೃತಿಯನ್ನು ಬರೆದ ವಾಲ್ಮೀಕಿ ರಾಮಾಯಣ ಪುಸ್ತಕವನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು. ಸರ್ವ ಜನಾಂಗಗಳು ಮಹರ್ಷಿ ವಾಲ್ಮೀಕಿಯನ್ನು ಪೂಜಿಸುವಂತಹ ಆಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾ ಅಧ್ಯಕ್ಷ ಪಾಳೆಗಾರ್ ಲೋಕೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆದಿಲಕ್ಷ್ಮಿ ನರಸಿಂಹ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ಸಂಜೀವ ರೆಡ್ಡಿ, ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಿಂಹಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರಮ್ಮ, ಮುಖಂಡರುಗಳಾದ ಡಿಸಿಸಿ ಬ್ಯಾಂಕ್ ಚಿತ್ತಗಾನಹಳ್ಳಿ ಚಂದ್ರುಅಜಯ್ ಕುಮಾರ್, ರಾಮಪ್ಪ, ನಾಗರಾಜ್, ಮದಕರಿ ನಾಯಕ, ಅಂಜಪ್ಪ, ಓಂಕಾರ ನಾಯಕ, ಪುಟ್ಟರಾಜು, ಪರಮೇಶ್, ಅಂಜನ್ ನಾಯಕ, ಲಿಂಗಪ್ಪ, ಬೋರ ನಾಯಕ, ಅನಂತಯ್ಯ, ಮೋಹನ್ ಕುಮಾರ್, ಮುಂತಾದವರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296