nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ

    December 25, 2025
    Facebook Twitter Instagram
    ಟ್ರೆಂಡಿಂಗ್
    • “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
    • ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
    • ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
    • ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    • ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು
    • ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ
    ಕೊರಟಗೆರೆ January 20, 2022

    ಕೊರೊನಾ ಹೆಚ್ಚಿದೆ, ಜಾತ್ರೆ ನಡೆಯುವುದಿಲ್ಲ ಬರಬೇಡಿ: ರೈತರಿಗೆ ತಹಸೀಲ್ದಾರ್ ಮನವಿ

    By adminJanuary 20, 2022No Comments2 Mins Read
    jathre

    ಕೊರಟಗೆರೆ : ತಾಲ್ಲೂಕಿನ  ಹೊಳವನಹಳ್ಳಿ ಹೋಬಳಿಯ ಸುಪ್ರಸಿದ್ಧ ಕಮನೀಯ ಕ್ಷೇತ್ರದ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಸನ್ನಿಧಾನದಲ್ಲಿ ಪ್ರತಿ ವರ್ಷವೂ ಸಂಕ್ರಾಂತಿ ಮುಗಿದ ಮಾರನೇ ದಿನ ರಾಸುಗಳ ಜಾತ್ರೆ ಪ್ರಾರಂಭವಾಗಿ, ಸುಮಾರು ಹತ್ತರಿಂದ ಹದಿನೈದು ದಿನಗಳ ಕಾಲ ಭಾರೀ ರಾಸುಗಳ ಜಾತ್ರೆ ನಡೆಯುತ್ತಿತ್ತು. ರಾಸುಗಳ ಜಾತ್ರೆ ಮುಗಿದ ನಂತರ ಶ್ರೀ ಆಂಜನೇಯ ಸ್ವಾಮಿಯ  ಬ್ರಹ್ಮರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊವಿಡ್ ಹಿನ್ನೆಲೆಯಲ್ಲಿ ಜಾತ್ರೆಗೆ ನಿರ್ಬಂಧ ಹಾಕಲಾಗಿದೆ.

    ಕೊವಿಡ್ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದಂತೆ  ಜಾತ್ರೆ ನಡೆದಂತೆ ತಾಲ್ಲೂಕು ಆಡಳಿತವು  ನಿರ್ಬಂಧವನ್ನು ವಿಧಿಸಿದ್ದು, ಈ ವಿಚಾರ ತಿಳಿಯದೇ  ರಾಸುಗಳನ್ನು ಮಾರಲು ಮತ್ತು ಕೊಳ್ಳಲು ಬಂದ ರೈತರು ನಿರಾಸೆಯಿಂದ ತಮ್ಮ ಊರಿಗೆ ತೆರಳುವಂತಾಗಿದೆ.


    Provided by
    Provided by

    ಈ ಸಂಬಂಧ ತಾಲೂಕ ದಂಡಾಧಿಕಾರಿ ನಹಿದಾ ಜಮ್ ಜಮ್ ಮಾತನಾಡಿ, ತಾಲ್ಲೂಕಿನಲ್ಲಿ ನಡೆಯುವ ಯಾವುದೇ ಸಭೆ ಸಮಾರಂಭ ಜಾತ್ರೆ ಉರೂಸ್ ಇನ್ನಿತರ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳ ಮುಖೇನ ಸೂಚನೆ ಹೊರಡಿಸಲಾಗಿದೆ. ಆದರೂ ಕ್ಯಾಮೆನಹಳ್ಳಿಯ ಜಾತ್ರೆ ಇದೆ ಎಂದುಕೊಂಡು ಜನರು ಜಾನುವಾರುಗಳನ್ನು  ಮಾರಲು ಮುಂದಾಗಿದ್ದಾರೆ .ಆದರೆ ಈಗ ಇದ್ಯಾವುದೂ ನಡೆಯುವುದಕ್ಕೆ ಅವಕಾಶವಿಲ್ಲ ಕಾರಣ ಕೊರೊನಾ ಎಂಬ ಮಾಹಾಮಾರಿಯು ರಾಜ್ಯ ಜಿಲ್ಲೆ ಸೇರಿದಂತೆ  ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಆದ್ದರಿಂದ ಸಾರ್ವಜನಿಕರು ಅಧಿಕಾರಿಗಳ ಜತೆ ಸೌಮ್ಯದಿಂದ ವರ್ತಿಸಿ ಅಧಿಕಾರಿಗಳು ಹೇಳಿದಂತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು  ಕಾಯ್ದುಕೊಂಡು ಯಾವುದೇ ರೋಗರುಜಿನಗಳು ಬರದಂತೆ ಸಹಕರಿಸಿ  ದಯವಿಟ್ಟು ಯಾವುದೇ ಜಾತ್ರೆ ಸಮಾರಂಭಗಳನ್ನು ಇಂತಹ ಸಮಯದಲ್ಲಿ ಮಾಡಬೇಡಿ ಎಂದು ರೈತರು ಹಾಗೂ ಸಾರ್ವಜನಿಕರಲ್ಲಿ  ಮನವಿ ಮಾಡಿದರು .

    ಇನ್ನೂ ಜಾತ್ರೆ ಇದೆ ಎಂದು ಆಗಮಿಸಿದ್ದ ರೈತರೊಬ್ಬರು ಮಾತನಾಡಿ, ಬಹಳ ವರ್ಷಗಳಿಂದ ನಾವು ಈ ಜಾತ್ರೆಗೆ ಬರುತ್ತಿದ್ದೆವು. ನಾವಲ್ಲದೆ ರಾಜ್ಯದ ಅನೇಕ ಭಾಗಗಳಿಂದ ರೈತರು ಬರುತ್ತಿದ್ದರು. ಜಾನುವಾರುಗಳನ್ನು ಮಾರುವುದು, ತೆಗೆದುಕೊಳ್ಳುವುದು ಮಾಡುತ್ತಿದ್ದೆವು. ಆದರೆ ಈ ಬಾರಿ ಜಾತ್ರೆ ಇದೆ ಎಂದುಕೊಂಡು ಬಂದಿದ್ದವು. ಇಲ್ಲಿಗೆ ಬಂದಾಗ ಅರ್ಥವಾಯ್ತು. ಪೋಲಿಸ್ ಅಧಿಕಾರಿಗಳು  ಜಾತ್ರೆ ನಡೆಯುವುದಿಲ್ಲ,  ಊರುಗಳಿಗೆ ಹಿಂತಿರುಗಿ ಎಂದು ತಿಳಿಸಿದರು. ಅದರಂತೆ ನಾವು ವಾಪಸ್ ತೆರಳುತ್ತಿದ್ದೇವೆ ಎಂದು ನಿರಾಸೆ ವ್ಯಕ್ತಪಡಿಸಿದರು.

    ಇನ್ನೂ ಈ ವಿಚಾರವಾಗಿ ದೇವಸ್ಥಾನದ  ಸಮಿತಿ ಅಧ್ಯಕ್ಷ ಬಾಲರಾಜು ಮಾತನಾಡಿ,  ನಾವು ಈಗಾಗಲೇ ಜಾತ್ರೆ ನಡೆಯುವುದಿಲ್ಲ ಎಂದು ಪಾಂಪ್ಲೆಟ್ ಮುಖಾಂತರ ಎಲ್ಲಾ ಹಳ್ಳಿಗಳಿಗೂ ಹಾಗೂ ನಮ್ಮ ತಾಲ್ಲೂಕಿನ ಗಡಿ ಭಾಗದವರೆಗೂ ತಿಳಿಸಿದ್ದೇವೆ. ಆದರೂ ಕೆಲವು ಕಿಡಿಗೇಡಿಗಳು ಮಾಡಿರುವ ವದಂತಿಯಿಂದ ಜಾತ್ರೆಯಿದೆ ಎಂದು ತಿಳಿದುಕೊಂಡು ರೈತರು ದೂರದ ಊರುಗಳಿಂದ ಆಗಮಿಸಿದ್ದರು. ಅವರಿಗೆ ಜಾತ್ರೆ ಇಲ್ಲವೆಂದು ಅರ್ಥ ಮಾಡಿಸಿ  ವಾಪಸ್ ಕಳುಹಿಸುತ್ತಿದ್ದೇವೆ ಎಂದು ತಿಳಿಸಿದರು.

    ವರದಿ:  ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ನಿ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಭೇಟಿ

    December 20, 2025

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    Leave A Reply Cancel Reply

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ದಿನಕ್ಕೊಂದು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ರಕ್ಷಿತಾ…

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ

    December 25, 2025

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.