nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.1ರಂದು ನಾಡಧ್ವಜ ಹಾರಿಸದೆ ಅವಮಾನ: ಮಧುಗಿರಿ ಅಬಕಾರಿ ಡಿವೈಎಸ್ಪಿ ವಿರುದ್ಧ ಕ್ರಮಕ್ಕೆ ಕಾಳಜಿ ಫೌಂಡೇಶನ್, ಕರ್ನಾಟಕ ರಣಧೀರರ ವೇದಿಕೆ ಆಗ್ರಹ
    ತುಮಕೂರು November 6, 2024

    ನ.1ರಂದು ನಾಡಧ್ವಜ ಹಾರಿಸದೆ ಅವಮಾನ: ಮಧುಗಿರಿ ಅಬಕಾರಿ ಡಿವೈಎಸ್ಪಿ ವಿರುದ್ಧ ಕ್ರಮಕ್ಕೆ ಕಾಳಜಿ ಫೌಂಡೇಶನ್, ಕರ್ನಾಟಕ ರಣಧೀರರ ವೇದಿಕೆ ಆಗ್ರಹ

    By adminNovember 6, 2024No Comments3 Mins Read

    ತುಮಕೂರು : ಜಿಲ್ಲೆಯ ಮಧುಗಿರಿಯ ವಲಯ ಅಬಕಾರಿ ಇಲಾಖೆಯ ಕಚೇರಿಯಲ್ಲಿ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ದಿನದಂದು ನಾಡ ಧ್ವಜವನ್ನು ಹಾರಿಸದೆ, ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡದೆ ಇರುವುದನ್ನು ಖಂಡಿಸಿ ಸ್ಥಳೀಯ ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಿ ಮಧುಗಿರಿ ವಲಯದ ಡಿವೈಎಸ್ಪಿ ಚಂದ್ರಪ್ಪಗೆ ಗೇರಾವ್ ಹಾಕಿದ್ದ ಘಟನೆ ನಡೆದಿತ್ತು.

    ಕನ್ನಡ ರಾಜ್ಯೋತ್ಸವವು ಕರ್ನಾಟಕದ ನೆಲ ಜಲ ಭಾಷೆ ಸಂಸ್ಕೃತಿ ಪರಂಪರೆಯ ಪ್ರತೀಕ ನಾಡಿನ ಗೌರವ ಸ್ವಾಭಿಮಾನದ ಸಂಕೇತ. ನಮ್ಮ ನಾಡು ನುಡಿಯನ್ನ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಯುವ ಪೀಳಿಗೆಗೆ ನಮ್ಮ ನಾಡಿನ ಇತಿಹಾಸ ಸಂಸ್ಕೃತಿ ಮತ್ತು ಕಲೆಯ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ರಾಜ್ಯ ಸರ್ಕಾರದ ಸೂಚನೆಯಂತೆ ಈ ಬಾರಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳಲ್ಲಿ, ಐಟಿ ಬಿಟಿ ಕಂಪನಿಗಳಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿಯೂ ಸಹ ತಪ್ಪದೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ನಮ್ಮ ಹೆಮ್ಮೆಯ ನಾಡಧ್ವಜವನ್ನು ಧ್ವಜಾರೋಹಣ ಮಾಡಿ ನಾಡ ಧ್ವಜಕ್ಕೆ ಗೌರವವನ್ನು ಸಲ್ಲಿಸಬೇಕೆಂದು ಸರ್ಕಾರವು ಆದೇಶವನ್ನು ನೀಡಿದ್ದರು. ಸಹ ಮಧುಗಿರಿ ವಲಯ ಅಬಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡದೆ ನಾಡ ಧ್ವಜವನ್ನು ಧ್ವಜಾರೋಹಣ ಮಾಡದೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ್ದ ಘಟನೆ ನಡೆದಿತ್ತು.

    ಕನ್ನಡಪರ ಹೋರಾಟಗಾರರು ಈ ವಿಚಾರ ತಿಳಿದ ತಕ್ಷಣ ಮಧುಗಿರಿ ವಲಯ ಅಬಕಾರಿ ಕಚೇರಿಗೆ ತೆರಳಿ ಡಿವೈಎಸ್ಪಿ ಚಂದ್ರಪ್ಪಗೆ ತಿಳುವಳಿಕೆ ನೀಡುವ ಕಾರ್ಯ ಮಾಡಿದ್ದರು. ಮತ್ತು ಮೇಲಾಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು ತಂದಿದ್ದರು. ಆದರೆ ಬೇಜವಾಬ್ದಾರಿ ತನದಿಂದ ಕನ್ನಡಪರ ಹೋರಾಟಗಾರರಿಗೆ ಉತ್ತರ ನೀಡಿದ್ದು ಕಂಡುಬಂದಿತ್ತು. ಅಬಕಾರಿ ಡಿವೈಎಸ್ಪಿ ಚಂದ್ರಪ್ಪ ನಡೆದುಕೊಂಡ ರೀತಿಯನ್ನು ಕನ್ನಡಪರ ಹೋರಾಟಗಾರರು ತೀವ್ರವಾಗಿ ಖಂಡಿಸಿದ್ದರು. ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದ್ದವು.

    ಕನ್ನಡಪರ ಹೋರಾಟಗಾರರು ಅಧಿಕಾರಿಗಳ ಗಮನ ಸೆಳೆಯಲು ಮುಂದಾದಾಗ ಡಿವೈಎಸ್ಪಿ ಚಂದ್ರಪ್ಪ  ಅಬಕಾರಿ ಇನ್ಸ್ಪೆಕ್ಟರ್ ಮೇಲೆ ಇನ್ಸ್ಪೆಕ್ಟರ್ ರವರು ಡಿವೈಎಸ್ಪಿರವರ ಮೇಲೆ ಹಾಕಿ, ಧ್ವಜವನ್ನು ಹಾರಿಸುವ ವಿಷಯದಲ್ಲಿ ಪಲಾಯನ ಮಾಡುವ ಕೆಲಸ ಮಾಡಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೋರಾಟಗಾರರು ಕಿಡಿಕಾರಿದ್ದರು.

     ನೆಲ ಒರೆಸುವ ಕಡ್ಡಿಗೆ ನಾಡ ಧ್ವಜ ಸಿಕ್ಕಿಸಿ ಅಪಮಾನ:

    ಕಚೇರಿಯ ನೆಲ ಒರೆಸುವ ಮಾಪ್ ಕಡ್ಡಿಗೆ ನಾಡ ಧ್ವಜವನ್ನು ಸಿಕ್ಕಿಸಿ ನಾಡಧ್ವಜಕ್ಕೆ ಅವಮಾನ ಮಾಡಿರುವ ಘಟನೆಯೂ ಸಹ ಕಚೇರಿಯಲ್ಲಿ ನಡೆದಿತ್ತು. ಕನ್ನಡಪರ ಹೋರಾಟಗಾರರು ಇದರ ವಿರುದ್ಧ ಧ್ವನಿ ಎತ್ತಿದಾಗ ಅಬಕಾರಿ ಡಿವೈಎಸ್ಪಿ ಚಂದ್ರಪ್ಪ ಉತ್ತರ ಕೊಡದೆ ಪಲಾಯನ ಮಾಡಲು ಮುಂದಾಗಿದ್ದು ನಾಚಿಕೆಗೇಡಿನ ಸಂಗತಿಯಾಗಿತ್ತು.

    ಕಾಳಜಿ ಫೌಂಡೇಶನ್ ವತಿಯಿಂದ ಅಬಕಾರಿ ಉಪ ಆಯುಕ್ತರಿಗೆ ದೂರು:

    ಕನ್ನಡಿಗರ ತೆರಿಗೆ ಹಣದಲ್ಲಿ ಸಂಬಳ ಪಡೆಯುತ್ತಿರುವ ಸರ್ಕಾರಿ ಅಧಿಕಾರಿಗಳೇ ಇಂತಹ ತಪ್ಪುಗಳನ್ನು ಮಾಡಿದರೆ ಹೇಗೆ ಕನ್ನಡದ ವಿರೋಧಿಯಾಗಿ ನಡೆದುಕೊಂಡ ಅಬಕಾರಿ ಡಿವೈಎಸ್ಪಿ ಚಂದ್ರಪ್ಪ ಮತ್ತು ಇನ್ಸ್ಪೆಕ್ಟರ್ ರಾಮ್ ಮೂರ್ತಿ ರವರನ್ನು ತಕ್ಷಣ ಅಮಾನತ್ತು ಮಾಡಬೇಕೆಂದು ಕಾಳಜಿ ಫೌಂಡೇಶನ್ ತುಮಕೂರು ಮತ್ತು ಕರ್ನಾಟಕ ರಣಧೀರರ ವೇದಿಕೆ ಕಾರ್ಯಕರ್ತರು ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


     

    ನಾಡಿನ ನೆಲ ಜಲ ಭಾಷೆಯ ಸಂಸ್ಕೃತಿ, ಪರಂಪರೆ ಸ್ವಾಭಿಮಾನವನ್ನು ಸಾರುವ ಕನ್ನಡ ರಾಜ್ಯೋತ್ಸವದ ಹಬ್ಬವನ್ನು ಆಚರಣೆ ಮಾಡುವಲ್ಲಿ ಉದ್ದಟತನ ಮತ್ತು ನಿರ್ಲಕ್ಷತೆ ತೋರಿದ ಮಧುಗಿರಿ ವಲಯ ಅಬಕಾರಿ ಇಲಾಖೆಯ ಡಿವೈಎಸ್ಪಿ ಚಂದ್ರಪ್ಪ ಮತ್ತು ಇನ್ಸ್ಪೆಕ್ಟರ್ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ಅವರನ್ನು ವಜಾಗೊಳಿಸಿ ಸಮಗ್ರ ತನಿಖೆ ನಡೆಸಬೇಕು.

    –ಮಂಜುಸ್ವಾಮಿ ಎಂ.ಎನ್., ಅಧ್ಯಕ್ಷರು, ಕರ್ನಾಟಕ ರಣಧೀರರ ವೇದಿಕೆ.


    ಸರ್ಕಾರಿ ಕೆಲಸ ದೇವರ ಕೆಲಸವೆಂದು ಪರಿಗಣಿಸಿ ಸರ್ಕಾರಿ ನೌಕರರು ನಿಷ್ಠಾವಂತರಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಆದರೆ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಕೆಡಿಪಿ ಸಭೆಗೆ ಗೈರು ಹಾಜರಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣರವರಿಂದ ಛೀಮಾರಿ ಹಾಕಿಸಿಕೊಂಡು. ಸ್ವತಃ ಸಹಕಾರ ಸಚಿವ ಕೆ.ಎನ್. ರಾಜಣ್ಣರವರೇ ಅಬಕಾರಿ ಡಿವೈಎಸ್ಪಿ ಚಂದ್ರಪ್ಪರವನ್ನು ಅಮಾನತ್ತು ಮಾಡಬೇಕೆಂದು ಅಬಕಾರಿ ಸಚಿವರಿಗೆ ಮತ್ತು ಸರ್ಕಾರಕ್ಕೆ ಪತ್ರ ಬರೆದಿದ್ದರು . ಸರ್ಕಾರ ಇಲ್ಲಿಯವರೆಗೂ ಕ್ರಮ ಕೈಗೊಂಡಿಲ್ಲ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಕನ್ನಡಿಗರ ವಿರೋಧಿ ಅಬಕಾರಿ ಡಿವೈಎಸ್ಪಿ ಚಂದ್ರಪ್ಪರವನ್ನು ಇಲಾಖೆ ತಕ್ಷಣವೇ ಅಮಾನತು ಮಾಡಬೇಕು.

    –ಜಿ.ಎಲ್.ನಟರಾಜು ಅಧ್ಯಕ್ಷರು, ಕಾಳಜಿ ಫೌಂಡೇಶನ್, ತುಮಕೂರು.


    ಈ ಸಂದರ್ಭದಲ್ಲಿ ಕಾಳಜಿ ಫೌಂಡೇಶನ್ ಅಧ್ಯಕ್ಷರಾದ ಜಿ.ಎಲ್.ನಟರಾಜ್, ಉಪಾಧ್ಯಕ್ಷ ರಫೀಕ್ ಪಾಷಾ, ಕಾರ್ಯದರ್ಶಿ ಮುನಿಲಕ್ಷ್ಮಯ್ಯ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್, ಕಾನೂನು ಸಲಹೆಗಾರರಾದ ಶಿವಕುಮಾರ್ ಮೇಷ್ಟ್ರು ಮನೆ, ಎಂ.ಎಸ್. ಗಣೇಶ್, ಮೋಹನ್ ಎಸ್.ಎಲ್. ಪದ್ಮನಾಭ ಮತ್ತು ಕರ್ನಾಟಕ ರಣಧೀರರ ವೇದಿಕೆಯ ಮಂಜುಸ್ವಾಮಿ ಎಂ.ಎನ್., ಮುತ್ತುರಾಜು, ಸತೀಶ್, ನಾಗೇಶ್, ಸುರೇಶ್ ಮತ್ತು ಕಾರ್ಯಕರ್ತರು ಮಧುಗಿರಿ ವಲಯ ಅಬಕಾರಿ ಡಿವೈಎಸ್ಪಿ ಮತ್ತು ಇನ್ಸ್ಪೆಕ್ಟರ್ ವಿರುದ್ಧ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

     ರಾಘವೇಂದ್ರ ಅಡಿಗ ಎಚ್ಚೆನ್. ಹೆಲ್ತ್‌ ಕೇರ್ ಗ್ಲೋಬಲ್ ಎಂಟರ್‌ ಪ್ರೈಸಸ್ (HCG), ಬೆಂಗಳೂರು, ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್…

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.